ಬೆಂಗಳೂರು: ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವರಾಗಿರುವ ಆನಂದ್ ಸಿಂಗ್ಗೆ ವಿಜಯನಗರ ಜಿಲ್ಲಾ ಉಸ್ತವಾರಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಆನಂದ್ ಸಿಂಗ್ ಒತ್ತಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮಣಿದಿದ್ದಾರಾ? ಎಂಬ ಅನುಮಾನ ಮೂಡಿದೆ.
ಸಚಿವ ಆನಂದ್ ಸಿಂಗ್ಗೆ ಸ್ವಂತ ಜಿಲ್ಲೆ ವಿಜಯನಗರ ಉಸ್ತುವಾರಿ ನೀಡಿದ್ದರೆ, ಶಶಿಕಲಾ ಜೊಲ್ಲೆಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ನೀಡಿ ಆದೇಶ ಹೊರಡಿಸಲಾಗಿದೆ. ಆನಂದ್ ಸಿಂಗ್ ಹಾಗೂ ಶಶಿಕಲಾ ಜೊಲ್ಲೆಯ ಉಸ್ತುವಾರಿಗಳನ್ನು ಅದಲು-ಬದಲು ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ.
ಸ್ವಂತ ಜಿಲ್ಲೆಗಳ ಉಸ್ತುವಾರಿ ನೀಡುವಂತಿಲ್ಲ ಎಂಬ ಹೈಕಮಾಂಡ್ ಸೂಚನೆ ಇದ್ದರೂ ಸಿಎಂ ಬೊಮ್ಮಾಯಿ ಅವರು ಆನಂದ್ ಸಿಂಗ್ಗೆ ವಿಜಯನಗರ ಜಿಲ್ಲಾ ಉಸ್ತುವಾರಿ ನೀಡಿರುವುದು ಕುತೂಹಲ ಕೆರಳಿಸಿದೆ.
ಇದನ್ನೂ ಓದಿ: ಬೊಮ್ಮಾಯಿ ಮಾಡೆಲ್ ವಿಫಲವಾಯಿತು ಎಂದು ಒಪ್ಪಿಕೊಂಡಿದ್ದಾರಾ?: ಯುಪಿ ಮಾಡೆಲ್ ಹೇಳಿಕೆಗೆ ಖಾದರ್ ತಿರುಗೇಟು