ETV Bharat / city

Bengaluru rains: ಜೆಎನ್​ಸಿಎಎಸ್​ಆರ್​ಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

author img

By

Published : Nov 23, 2021, 2:41 PM IST

Bengaluru rains: ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದ ಅವಾಂತರಗಳು ಸಂಭವಿಸುತ್ತಿವೆ. ಇಂದು ಮಳೆ ನೀರು ನಿಂತು ಹಾನಿಗೊಳಗಾಗಿರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದರು.

ಜೆಎನ್​ಸಿಎಎಸ್​ಆರ್​, JNCASR
ಜೆಎನ್​ಸಿಎಎಸ್​ಆರ್​, JNCASR

ಯಲಹಂಕ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೀರು ನುಗ್ಗಿ ಹಾನಿಗೊಳಲಾಗಿದ್ದ ಯಲಹಂಕದ ಜಕ್ಕೂರು ಬಳಿಯ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

cm-basavaraj-bommai-visit-jncasr
ಜೆಎನ್​ಸಿಎಎಸ್​ಆರ್​ಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

ಜೆಎನ್​ಸಿಎಎಸ್​ಆರ್​ ಸಂಸ್ಥೆಯ ಮುಖ್ಯಸ್ಥ, 'ಭಾರತರತ್ನ' ಸಿ.ಎನ್.ಆರ್.ರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಸಮಯದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಸಹ ಇದ್ದರು.

JNCASR campus flood: ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ (Bengaluru rains) ಭಾರಿ ಮಳೆಯಾಗುತ್ತಿದೆ. ಪರಿಣಾಮ, ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಮಳೆ ನೀರು ನುಗ್ಗಿತ್ತು. ಮೂರ್ನಾಲ್ಕು ದಿನಗಳಿಂದ ಮಳೆಯ ನೀರು ಹಾಗೆಯೇ ನಿಂತಿದೆ. ಸಂಶೋಧನಾ ಕೊಠಡಿಗೂ ಸಹ ನೀರು ನುಗ್ಗಿದ್ದು, ದಾಖಲೆಗಳು ಮತ್ತು ಕಂಪ್ಯೂಟರ್​ಗಳು ಹಾನಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.