ETV Bharat / city

ಬೆಂಗಳೂರಲ್ಲಿ ಪಟಾಕಿ ಸಿಡಿದು ಬಾಲಕನ ಕಣ್ಣಿಗೆ ಗಾಯ.. ಬೆಳಕಿನ ಹಬ್ಬದಲ್ಲಿ ಬದುಕು ಕತ್ತಲಾಗದಿರಲಿ

author img

By

Published : Nov 4, 2021, 4:00 PM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಟಾಕಿ ಸಿಡಿದು ಬಾಲಕನ ಕಣ್ಣಿಗೆ ಗಾಯಗಳಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಆ ಬಾಲಕ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೆಂಗಳೂರು: ದೀಪಾವಳಿ ಹಬ್ಬದ ದಿನವೇ ನಗರದಲ್ಲಿ ಪಟಾಕಿ ಅವಘಡ ಸಂಭವಿಸಿದೆ. ಬಣ್ಣ ಬಣ್ಣದ ಪಟಾಕಿಗಳು ಮಕ್ಕಳ ಖುಷಿಯನ್ನು ಹೆಚ್ಚಿಸಿದ್ರೂ, ಅದರ ಹಿಂದೆಯೇ ಅಪಾಯ ಕಾದಿದೆ ಎಂಬುದನ್ನು ಅರಿತುಕೊಳ್ಳಬೇಕಿದೆ.

ಈಗಾಗಲೇ 9 ವರ್ಷದ ಬಾಲಕನ ಕಣ್ಣಿಗೆ ಪಟಾಕಿಯಿಂದ ಹಾನಿಯಾಗಿದ್ದು, ಮುಖದ ಚರ್ಮ ಸುಟ್ಟು ಹೋಗಿದೆ. ಸದ್ಯ ಬಾಲಕ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಸವನಗುಡಿ ನಿವಾಸಿಯಾಗಿರುವ ಈ ಬಾಲಕ ನಿನ್ನೆ (ಬುಧವಾರ) ರಾತ್ರಿ ತನ್ನ ಮನೆಯಲ್ಲಿ ಫ್ಲವರ್ ಪಾಟ್ (ಹೂಕುಂಡ) ಪಟಾಕಿಯ‌ನ್ನು ಸಿಡಿಸಲು ಹೋದಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

ಅದೃಷ್ಟವಶಾತ್ ಬಾಲಕನ ಕಣ್ಣಿನ ದೃಷ್ಟಿಗೆ ಸಮಸ್ಯೆಯಾಗಿಲ್ಲ. ಕಣ್ಣಿನ ರೆಪ್ಪೆ ಹಾಗು ಮುಖದ ಚರ್ಮ ಸುಟ್ಟು ಹೋಗಿದ್ದು, ಕಣ್ಣಿನ ಸುತ್ತ ಗಾಯವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಉಳಿದಂತೆ ನಗರದಲ್ಲಿ ಈ ವರ್ಷ ಪಟಾಕಿ ಅಬ್ಬರ ಕಡಿಮೆಯಾಗಿದ್ದು, ಯಾವುದೇ ಪ್ರಕರಣಗಳು ದಾಖಲಾಗಿಲ್ಲ.

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದು ಸಾಮಾನ್ಯವಾದರೂ, ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕಿದೆ. ಮಕ್ಕಳು ಪಟಾಕಿ ಸಿಡಿಸುವಾಗ ಅವರ ಮೇಲೆ ಪೋಷಕರು ನಿಗಾ ವಹಿಸಬೇಕಿದೆ. ಇಲ್ಲದಿದ್ದರೆ ಬೆಳಕಿನ ಹಬ್ಬ ಬದುಕಿಗೆ ಕತ್ತಲು ಮೂಡುವಂತೆ ಮಾಡಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.