ETV Bharat / city

ಸ್ವಾತಂತ್ರ್ಯ ಅಮೃತ​ ಮಹೋತ್ಸವ: ಹುತಾತ್ಮ ಸೈನಿಕರಿಗೆ ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

author img

By

Published : Aug 15, 2022, 10:34 AM IST

Updated : Aug 15, 2022, 11:21 AM IST

ದೇಶದ ಸ್ವಾವಲಂಬನೆಗೆ ರೈತರ ಕೊಡುಗೆ ದೊಡ್ಡದು ಎಂದ ಅವರು ಗಡಿಯಲ್ಲಿ ಚಳಿಮಳೆಗಾಳಿಗೆ ಜಗ್ಗದೆ ಕಾಯುತ್ತಿರುವ ಯೋಧರ ಕರ್ತವ್ಯಯನ್ನು ಸ್ಮರಿಸುವ ಜೊತೆಗೆ ಅವರಿಗಾಗಿ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ.

CM Basavaraj Bommai Independence Day Speech, Independence Day 2022 , Karnataka State on Independence Day, Azadi Ka Amrit Mahotsav, Indian Independence day, Har Ghar Tiranga, ಸ್ವಾತಂತ್ರ್ಯ ಅಮೃತ​ ಮಹೋತ್ಸವ, ಹುತಾತ್ಮ ಸೈನಿಕರಿಗೆ ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ, ದೇಶದ ಸ್ವಾವಲಂಬನೆಗೆ ರೈತರ ಕೊಡುಗೆ ದೊಡ್ಡದು, ಭಾರತದ ಸ್ವಾತಂತ್ರ್ಯ ಹೋರಾಟ, ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ, ಹೊಸ ಯೋಜನೆಗಳ ಘೋಷಣೆ, ಸ್ವಾತಂತ್ರ್ಯ ಅಮೃತ​ ಮಹೋತ್ಸವ 2022, ಸಿಎಂ ಬಸವರಾಜ ಬೊಮ್ಮಾಯಿ ಭಾಷಣ,
ಸ್ವಾತಂತ್ರ್ಯ ಅಮೃತ​ ಮಹೋತ್ಸವ

ಬೆಂಗಳೂರು: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೋಟ್ಯಂತರ ಜನರು ಪಾಲ್ಗೊಂಡಿದ್ದರು. ಬದ್ಧತೆ ಹೋರಾಟದಿಂದ ಅತಿಶಕ್ತ ಬ್ರಿಟಿಷ್ ಸಾಮ್ರಾಜ್ಯವನ್ನು ಮಣಿಸಬಹುದು ಎಂಬುದನ್ನು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸಾಧಿಸಿ ತೋರಿಸಿದರು. ಬಹುತೇಕ ಹೋರಾಟಗಾರರು ಅನಾಮಧೇಯರಾಗಿಯೇ ಉಳಿದರು. ಅಂಥ ಅನಾಮಧೇಯ ಹೋರಾಟಗಾರರಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಮರ್ಪಿಸುತ್ತಿದ್ದೇನೆ ಎಂದು ನಗರದ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

CM Basavaraj Bommai Independence Day Speech, Independence Day 2022 , Karnataka State on Independence Day, Azadi Ka Amrit Mahotsav, Indian Independence day, Har Ghar Tiranga, ಸ್ವಾತಂತ್ರ್ಯ ಅಮೃತ​ ಮಹೋತ್ಸವ, ಹುತಾತ್ಮ ಸೈನಿಕರಿಗೆ ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ, ದೇಶದ ಸ್ವಾವಲಂಬನೆಗೆ ರೈತರ ಕೊಡುಗೆ ದೊಡ್ಡದು, ಭಾರತದ ಸ್ವಾತಂತ್ರ್ಯ ಹೋರಾಟ, ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ, ಹೊಸ ಯೋಜನೆಗಳ ಘೋಷಣೆ, ಸ್ವಾತಂತ್ರ್ಯ ಅಮೃತ​ ಮಹೋತ್ಸವ 2022, ಸಿಎಂ ಬಸವರಾಜ ಬೊಮ್ಮಾಯಿ ಭಾಷಣ,
ಸ್ವಾತಂತ್ರ್ಯ ಅಮೃತ​ ಮಹೋತ್ಸವ

ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಹೊಸ ಯೋಜನೆಗಳ ಘೋಷಣೆ ಮಾಡಿದರು. ಭಾರತದಲ್ಲಿ ಸೇವಿಸುತ್ತಿರುವ ಕರ್ನಾಟಕ ಯೋಧರಿಗೆ ರಾಜ್ಯ ಸರ್ಕಾರ ದೂರದೃಷ್ಟಿಯನ್ನಿಟ್ಟುಕೊಂಡು ಯೋಜನೆಯೊಂದನ್ನು ಘೋಷಿಸಿದೆ.

ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತ ಪಟ್ಟರೆ ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು‌. ಯಾವುದೇ ಪ್ರಶ್ನೆಗಳನ್ನು ಕೇಳದೆ ನೇರವಾಗಿ ಅವರ ಮನೆಗಳಿಗೆ ಉದ್ಯೋಗ ಆದೇಶವನ್ನು ನೀಡಲಾಗುವುದು. ಇದರ ಜೊತೆಗೆ ಹುತಾತ್ಮ ಸೈನಿಕರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಶೇ 100 ಶೌಚಾಲಯ ನಿರ್ಮಾಣ: ಒಂದು ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ಶೌಚಾಲಯ ನಿರ್ಮಿಸುವುದಾಗಿ ಸಿಎಂ ತಿಳಿಸಿದರು. ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ. 100 ರಷ್ಟು ಶೌಚಾಲಯಗಳ ನಿರ್ಮಾಣ ಮಾಡಲಾಗುತ್ತದೆ. 250 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಭೂ ರಹಿತ ಕೃಷಿ ಕಾರ್ಮಿಕರಿಗೆ ರೈತ ವಿದ್ಯಾನಿಧಿ ಯೋಜನೆ: ಇದೇ ವೇಳೆ ಸಿಎಂ ಬೊಮ್ಮಾಯಿ ಭೂ ರಹಿತ ಕೃಷಿ ಕಾರ್ಮಿಕರಿಗೆ ರೈತ ವಿದ್ಯಾನಿಧಿ ನೀಡಲು ಯೋಜನೆ ಘೋಷಿಸಿದರು. ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದರು.

50 ಸಾವಿರ ರೂ. ಸಾಲ ಸಹಾಯಧನ: ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ.ಗಳ ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸುವುದಾಗಿ ಸಿಎಂ ಘೋಷಿಸಿದರು.

ಹೊಸ ಅಂಗನವಾಡಿಗಳ ನಿರ್ಮಾಣ: ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು ಎಂದು ಸಿಎಂ ಘೋಷಿಸಿದರು. ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತೆಯಾಗಿರಿಸಿಕೊಂಡು ಅಂಗನವಾಡಿಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಈ ಮೂಲಕ 16 ಲಕ್ಷ ಕಟುಂಬ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಮಕ್ಕಳಿಗೆ ಪೂರ್ವ ಶಿಕ್ಷಣ ಲಭಿಸುವುದರ ಜೊತೆಗೆ, 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಕಾಶ ಸಿಗಲಿದೆ ಎಂದರು.

ಓದಿ: ವಿವಿಧತೆಯಲ್ಲಿ ಏಕತೆಯೇ ಭಾರತದ ಶಕ್ತಿ.. 100ನೇ ವರ್ಷದ ಸ್ವಾತಂತ್ರ್ಯ ದಿನಕ್ಕೆ ಪಂಚ ಪ್ರಾಣ ಪ್ರತಿಪಾದಿಸಿದ ಮೋದಿ

Last Updated :Aug 15, 2022, 11:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.