ETV Bharat / city

ಪ್ರವೀಣ್​ ಹತ್ಯೆ ಹಿನ್ನೆಲೆ ಆತ್ಮಸಾಕ್ಷಿ ಮೂಲಕ ಜನೋತ್ಸವ ಸಮಾರಂಭ ರದ್ದು: ಸಿಎಂ ಬೊಮ್ಮಾಯಿ

author img

By

Published : Jul 28, 2022, 12:10 PM IST

Updated : Jul 28, 2022, 12:18 PM IST

CM Bommai reaction on Janostava cancelation: ಪ್ರವೀಣ್​ ಹತ್ಯೆ ಹಿನ್ನೆಲೆ ಆತ್ಮಸಾಕ್ಷಿ ಮೂಲಕ ಜನೋತ್ಸವ ಸಮಾರಂಭ ರದ್ದು - ಸರ್ಕಾರದ ಕಲ್ಯಾಣ ಕಾರ್ಯಕ್ರಮವನ್ನು ಜನರಿಗೆ ತಿಳಿಸುವ ಅಗತ್ಯೆಯಿದೆ- ಸಿಎಂ

CM Bommai reaction on Praveen Nettaru murder case, CM Bommai reaction on Janostava Function cancel, CM Bommai press meet in Bengaluru, Bengaluru news, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ, ಜನೋತ್ಸವ ಸಮಾರಂಭ ರದ್ದು ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ, ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ, ಬೆಂಗಳೂರು ಸುದ್ದಿ,
ಸಿಎಂ ಸುದ್ದಿಗೋಷ್ಟಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಹತ್ಯೆ ಹಿನ್ನೆಲೆ ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಸಚಿವರು, ಜಿಲ್ಲಾಧ್ಯಕ್ಷರು ಸೇರಿದಂತೆ ಎಲ್ಲರೊಂದಿಗೆ ಮಾತನಾಡಿ ಈ ನಿರ್ಣಯವನ್ನು ಆತ್ಮಸಾಕ್ಷಿ ಮೂಲಕ ತೆಗೆದುಕೊಳ್ಳಲಾಗಿದೆ. ಆದರೂ ಸರ್ಕಾರದ ಕಲ್ಯಾಣ ಕಾರ್ಯಕ್ರಮವನ್ನು ಹೇಳುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ನಮ್ಮದೊಂದು ಟೀಂ ವರ್ಕ್ ಆಗಿದೆ. ಸಚಿವ ಸಂಪುಟದಲ್ಲಿ ಸೇವಾ ಮನೋಭಾವನೆ ಇರುವವರು ಇದ್ದಾರೆ, ಅನುಭವಿಗಳಿದ್ದಾರೆ, ಉತ್ಸಾಹಿಗಳಿದ್ದಾರೆ. ಎಲ್ಲರಿಗೂ ಬದ್ಧತೆ ಇದೆ. ಕೋವಿಡ್ ನಿಯಂತ್ರಣ ಹಂತದಲ್ಲಿದ್ದಾಗ ಸಂದರ್ಭ ನಾನು ಅಧಿಕಾರ ಸ್ವೀಕರಿಸಿದೆ. ಆಡಳಿತ ಯಾರ ಪರವಾಗಿದೆ ಎಂಬುದು ಬಹಳ ಮುಖ್ಯ. ಜನ ಪರವಾದ ಆಡಳಿತ, ರಾಜ್ಯದ ಜನರು ಪಾಲ್ಗೊಳ್ಳುವಂತ ಆಡಳಿತ. ರೈತರ ಪರ, ರೈತ ವಿದ್ಯಾನಿಧಿ ಯೋಜನೆ ನೀಡಿದ್ದೇವೆ ಎಂದು ಹೇಳಿದರು.

10 ಲಕ್ಷ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಯೋಜನೆ ತಲುಪಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಯನ್ನೂ ಹೆಚ್ಚಿಗೆ ಮಾಡಿದ್ದೇವೆ. ಎಸ್​ಸಿ-ಎಸ್​ಟಿ ಸಮುದಾಯಕ್ಕೂ ಕೆಲ ನಿರ್ಣಯ ಮಾಡಿದ್ದೇವೆ. ಎಸ್​ಸಿ-ಎಸ್​ಟಿ, ಒಬಿಸಿ ಸಮುದಾಯಗಳಿಗೆ 800 ಕೋಟಿ ರೂ. ಹೆಚ್ಚುವರಿ ಹಣ ಕೊಟ್ಟಿದ್ದಲ್ಲದೆ ಅವರಿಗೆ 75 ಯುನಿಟ್​ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ ಎಂದು ಸಿಎಂ ತಿಳಿಸಿದರು.

ಈ ಒಂದು ವರ್ಷ ಕಾಲಾವಧಿಯಲ್ಲಿ ಹಲವಾರು ಸವಾಲುಗಳ ಮಧ್ಯೆ ಸಹಿತ ಸಾಧನೆಯನ್ನು ಮಾಡಿ ನಾವು ಕರ್ನಾಟಕವನ್ನು ಮುನ್ನಡೆಸಲು ಸಹಕಾರ ಕೊಟ್ಟಿರುವ ಕಾರ್ಯಕರ್ತರಿಗೆ, ಅಧ್ಯಕ್ಷರಿಗೆ, ಹಿರಿಯ ನಾಯಕ ಯಡಿಯೂರಪ್ಪ ಅವರಿಗೆ, ಪ್ರಧಾನಿ ಮೋದಿ ಸೇರಿದಂತೆ ಎಲ್ಲರಿಗೂ ಹೃದಯಪೂರ್ವಕವಾದ ಧನ್ಯವಾದಗಳು ಎಂದು ಬೊಮ್ಮಾಯಿ ಹೇಳಿದರು.

ಓದಿ: ಬಿಜೆಪಿ ಸಾಧನಾ ಸಮಾವೇಶ ರದ್ದು, ರಾಜ್ಯದಲ್ಲಿ ಭಯೋತ್ಪಾದಕ ನಿಗ್ರಹ ದಳ ರಚನೆಗೆ ಸರ್ಕಾರ ನಿರ್ಧಾರ

Last Updated : Jul 28, 2022, 12:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.