ETV Bharat / city

ರಾಯಚೂರು ಸೇರ್ಪಡೆ ಬಗ್ಗೆ ತೆಲಂಗಾಣ ಸಿಎಂ ಹೇಳಿಕೆ: ಬೊಮ್ಮಾಯಿ ಹೇಳಿದ್ದೇನು?

author img

By

Published : Aug 18, 2022, 5:37 PM IST

cm-bommai-reaction-on-telangana-cm-statement-about-raichur
ತೆಲಂಗಾಣಕ್ಕೆ ರಾಯಚೂರು ಸೇರ್ಪಡೆ ಹೇಳಿಕೆ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯಿಸುವೆ ಎಂದ ಸಿಎಂ

ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸುವ ತೆಲಂಗಾಣ ಸಿಎಂ ಹೇಳಿಕೆ ಈಗ ತಾನೇ ನನ್ನ ಗಮನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಬೆಂಗಳೂರು: ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸುವ ತೆಲಂಗಾಣ ಸಿಎಂ ಹೇಳಿಕೆ ಕುರಿತು ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಕೊಯಮತ್ತೂರು ಪ್ರವಾಸದಿಂದ ವಾಪಸ್ಸಾದ ನಂತರ ರೇಸ್​ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸ ರೇಸ್​ವ್ಯೂ ಕಾಟೇಜ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರ ಈಗಷ್ಟೇ ಗಮನಕ್ಕೆ ಬಂದಿದೆ. ಹೆಚ್ಚಿನ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ: ರಾಯಚೂರು ಬಗ್ಗೆ ತೆಲಂಗಾಣ ಸಿಎಂ ಹೇಳಿಕೆ: ಬಿಜೆಪಿ ಸರ್ಕಾರದ ಮೌನ ಪ್ರಶ್ನಿಸಿದ ಕಾಂಗ್ರೆಸ್​

ಕೊಡಗಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂಚರಿಸುತ್ತಿದ್ದ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ವಿಚಾರಕ್ಕೆ ಪ್ರತಿಕ್ರಿಯಿಸಲು ಸಿಎಂ ಬೊಮ್ಮಾಯಿ‌ ನಿರಾಕರಿಸಿದರು.

ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿಗರಿಂದ ಮೊಟ್ಟೆ ಎಸೆತ, ಕಪ್ಪು ಬಾವುಟ ಪ್ರದರ್ಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.