ETV Bharat / city

ಡಿಕೆಶಿ ಬಗ್ಗೆ ಸಲೀಂ-ಉಗ್ರಪ್ಪ ಸಂಭಾಷಣೆ ವಿಚಾರ.. ಡಿ ಕೆ ಶಿವಕುಮಾರ್ ವಿರುದ್ಧ ಅಲಂ ಪಾಷ ಎಸಿಬಿಗೆ ದೂರು..

author img

By

Published : Oct 18, 2021, 5:26 PM IST

ಡಿಕೆಶಿ ಮಾತ್ರವಲ್ಲ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧವೂ ಅಲಂ‌ ಪಾಷ ಅರೋಪಿಸಿದ್ದಾರೆ. ಆರೋಪಿಗಳ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ..

ಡಿ.ಕೆ.ಶಿವಕುಮಾರ್ ವಿರುದ್ಧ ಅಲಂ ಪಾಷ ಎಸಿಬಿಗೆ ದೂರು
ಡಿ.ಕೆ.ಶಿವಕುಮಾರ್ ವಿರುದ್ಧ ಅಲಂ ಪಾಷ ಎಸಿಬಿಗೆ ದೂರು

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಗ್ಗೆ ಸಲೀಂ ಹಾಗೂ ಉಗ್ರಪ್ಪ ಸಂಭಾಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ಧ ಎಸಿಬಿಗೆ ದೂರು ಸಲ್ಲಿಸಲಾಗಿದೆ. ಭ್ರಷ್ಟಾಚಾರದ ಆರೋಪದ ಹಿನ್ನೆಲೆ ತನಿಖೆ ನಡೆಸುವಂತೆ ದೂರು ಸಲ್ಲಿಸಲಾಗಿದೆ. ಹೆಲ್ಪಿಂಗ್ ಸಿಟಿಜನ್ ಅಂಡ್ ಪೀಪಲ್ಸ್ ಕೋರ್ಟ್ ಎಜಿಒ ಸಂಸ್ಥಾಪಕ ಅಲಂ ಪಾಷ ದೂರು ಸಲ್ಲಿಸಿದ್ದಾರೆ.

ಸಲೀಂ ಹಾಗೂ ಉಗ್ರಪ್ಪ ಸಂಭಾಷಣೆ ಅಕ್ಷರಶಃ ಸತ್ಯವಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರಿಗೆ ಡಿಕೆಶಿ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣ ಗೊತ್ತಿದೆ. ಅವರು ನೀರಾವರಿ ಹಾಗೂ ಜಲ ಸಂಪನ್ಮೂಲ ಇಲಾಖೆ ಸಚಿವಾರಾಗಿದ್ದಾಗ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೊಪಿಸಲಾಗಿದೆ.

ಡಿಕೆಶಿ 8 ರಿಂದ 12 ಪರ್ಸೆಂಟೇಜ್ ಕಮಿಷನ್ ಪಡೆದಿದ್ದಾರೆ. 2023ರ ಚುನಾವಣೆಗಾಗಿ ಕೋಟಿ ಕೋಟಿ ಭ್ರಷ್ಟಾಚಾರದ ಹಣ ಸಂಪಾದನೆ ಮಾಡಿದ್ದಾರೆ. ಅಕ್ರಮ‌ ಹಣ ಸಂಪಾದನೆ ಬಗ್ಗೆ ಗೊತ್ತಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಇತ್ತೀಚಿಗೆ ನಡೆದ ಐಟಿ ದಾಳಿಯಲ್ಲಿ ನೀರಾವರಿ ಇಲಾಖೆಯ ಅಕ್ರಮದ ದಾಖಲೆ ಸಿಕ್ಕಿವೆ. ಎಂ ಆರ್ ಉಮೇಶ್ ಹಾಗೂ ಮೂವರು ಕಾಂಟ್ರ್ಯಾಕ್ಟರ್ ಬಳಿ 750 ಕೋಟಿ ರೂ. ಅಕ್ರಮ‌ ಆಸ್ತಿ ಸಿಕ್ಕಿದೆ. ಲಂಚ ಪಡೆದು ಗುತ್ತಿಗೆದಾರರಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಡಿಕೆಶಿ ಮಾತ್ರವಲ್ಲ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧವೂ ಅಲಂ‌ ಪಾಷ ಅರೋಪಿಸಿದ್ದಾರೆ. ಆರೋಪಿಗಳ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಓದಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಕುರಿತ ಉಗ್ರಪ್ಪ-ಸಲೀಂ ಸಂಭಾಷಣೆಯ ವಿಡಿಯೋ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.