ETV Bharat / city

ಇಮ್ರಾನ್ ಮಹಮ್ಮದ್ ಶಫಿ ಕಳ್ಳಿಮನಿ ಉಚ್ಚಾಟನೆ ಆದೇಶ ವಾಪಸ್ ಪಡೆದ ಕಾಂಗ್ರೆಸ್

author img

By

Published : Nov 5, 2020, 7:42 PM IST

congress-withdraws-imran-mahmoud-shafi-eviction-order
ಕಾಂಗ್ರೆಸ್

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಚಾಟನೆಗೆ ಒಳಗಾಗಿದ್ದ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿ ಇಮ್ರಾನ್ ಮಹಮ್ಮದ್ ಶಫಿ ಕಳ್ಳಿಮನಿಯ ಉಚ್ಚಾಟನೆ ಆದೇಶವನ್ನು ರಾಜ್ಯ ಕಾಂಗ್ರೆಸ್​​ ಹಿಂಪಡೆದಿದೆ.

ಬೆಂಗಳೂರು: ಧಾರವಾಡ ಅಲ್ಪಸಂಖ್ಯಾತ ವಿಭಾಗದ ಮುಖಂಡ ಇಮ್ರಾನ್ ಮಹಮ್ಮದ್ ಶಫಿ ಕಳ್ಳಿಮನಿ ಅವರ ಉಚ್ಚಾಟನೆ ಆದೇಶವನ್ನು ರಾಜ್ಯ ಕಾಂಗ್ರೆಸ್ ಹಿಂಪಡೆದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಈ ಆದೇಶ ಹೊರಡಿಸಿದ್ದಾರೆ. ಇಮ್ರಾನ್​​ ಅವರು ಧಾರವಾಡ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Congress withdraws Imran Mahmoud Shafi eviction order
ಆದೇಶ ಪ್ರತಿ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಮ್ರಾನ್​ರನ್ನ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಕ್ಷಮೆ ಕೇಳಿದ ಹಿನ್ನೆಲೆ ಉಚ್ಚಾಟನಾ ಆದೇಶವನ್ನು ಕೆಪಿಸಿಸಿ ಅಧ್ಯಕ್ಷರ ಅನುಮೋದನೆಯ ಮೇರೆಗೆ ರದ್ದುಪಡಿಸಲಾಗಿದೆ.

ಧಾರವಾಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ನೀಡಿದ್ದ ಶಿಫಾರಸ್ಸಿನ ಮೇರೆಗೆ ಮತ್ತು ಪ್ರದೇಶ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನಂತೆ ಈ ಆದೇಶವನ್ನು ಜಾರಿಗೊಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.