ETV Bharat / city

ಪ್ರವಾಹಪೀಡಿತ ಪ್ರದೇಶಗಳಲ್ಲಿ ಟ್ರಾನ್ಸ್​​ಫಾರ್ಮರ್​ಗಳ ಎತ್ತರವನ್ನು ಹೆಚ್ಚಿಸಿ: ಡಿಸಿಎಂಕಾರಜೋಳ ಸೂಚನೆ

author img

By

Published : Jul 3, 2021, 11:35 PM IST

ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ಮತ್ತು ನದಿ ಪಾತ್ರದ ಗ್ರಾಮಗಳಲ್ಲಿ ಟ್ರಾನ್ಸ್​ಫಾರ್ಮರ್‌ಗಳ ಎತ್ತರವನ್ನು ಹೆಚ್ಚಿಸಬೇಕೆಂದು ಅಧಿಕಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ ನೀಡಿದರು.

dcm govinda karajola meeting with officials
ಪ್ರವಾಹಪೀಡಿತ ಪ್ರದೇಶಗಳಲ್ಲಿ ಟ್ರಾನ್ಸ್​​ಫಾರ್ಮರ್​ಗಳ ಎತ್ತರವನ್ನು ಹೆಚ್ಚಿಸಿ: ಡಿಸಿಎಂಕಾರಜೋಳ ಸೂಚನೆ

ಬೆಂಗಳೂರು : ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರತಿವರ್ಷ ಸಂಭವಿಸುತ್ತಿರುವ ಪ್ರವಾಹ ಮತ್ತು ಅಧಿಕ ಮಳೆಯಿಂದ ವಿದ್ಯುತ್ ಕಂಬಗಳು, ಟ್ರಾನ್ಸ್​ಫಾರ್ಮರ್​​​ಗಳು ಹಾನಿಗೊಳಗಾಗುತ್ತಿದ್ದು, ಮುಂಜಾಗ್ರತಾವಹಿಸಬೇಕೆಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ಶನಿವಾರ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯ ಚಿಕ್ಕೋಡಿ ಭಾಗದ ಪ್ರದೇಶದ ಹೆಚ್ಚಿನ ಗ್ರಾಮಗಳು, ಬಾಗಲಕೋಟೆ ಜಿಲ್ಲೆಯ ಬೀಳಗಿ, ಮುಧೋಳ, ಬಾಗಲಕೋಟೆ, ಬಾದಾಮಿಯಲ್ಲಿ ತಾಲೂಕಿನಲ್ಲಿ ಹೆಚ್ಚಿನ ಗ್ರಾಮಗಳು ಬಾಧಿತವಾಗುತ್ತಿರುವುದರಿಂದ ವಿದ್ಯುತ್ ಸಂಪರ್ಕ ಸ್ಥಗಿತಗೊಂಡು ಸಾರ್ವಜನಿಕರಿಗೆ ಅನಾನುಕೂಲವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಆದ್ದರಿಂದಾಗಿ ಈ ಪ್ರದೇಶಗಳಲ್ಲಿ ಹಾಗೂ ನದಿ ಪಾತ್ರದಲ್ಲಿರುವ ಗ್ರಾಮಗಳಲ್ಲಿರುವ ಟ್ರಾನ್ಸ್​ಫಾರ್ಮರ್‌ಗಳ ಎತ್ತರವನ್ನು ಹೆಚ್ಚಿಸಿ, ಪ್ರತಿ ವರ್ಷ ಸಂಭವಿಸಬಹುದಾದ ಸಮಸ್ಯೆಯನ್ನು ತಾಂತ್ರಿಕ ಹಾಗೂ ಯೋಜನಾಬದ್ದವಾಗಿ ಪರಿಹರಿಸಲು ಕ್ರಮವಹಿಸಬೇಕು ಎಂದು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.

ಇದನ್ನೂ ಓದಿ: UNLOCK 3.0 ಮುಖ್ಯಾಂಶಗಳು: ಜುಲೈ 5 ರಿಂದ ರಾಜ್ಯದಲ್ಲಿ ಯಾವುದಕ್ಕೆಲ್ಲಾ ಅವಕಾಶ?

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಇತರ ನಿಗಮಗಳು ಅನುಷ್ಟಾನಗೊಳಿಸುವ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆ ಬಾವಿಗಳಿಗೆ ವಿದ್ಯುದ್ಧೀಕರಣವನ್ನು ಸಕಾಲದಲ್ಲಿ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯು ನೀಡುವ 50 ಸಾವಿರ ರೂ. ಅನುದಾನ ಕೊರತೆಯಾದರೆ ಇಂಧನ ಇಲಾಖೆಯಲ್ಲಿರುವ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಈ ಯೋಜನೆಗೆ ಬಳಕೆ ಮಾಡಿಕೊಂಡು ವಿದ್ಯುದೀಕರಣ ಕಾರ್ಯವನ್ನು ಸಕಾಲದಲ್ಲಿ ಮಾಡಿದರೆ ಯೋಜನೆಯ ಉದ್ದೇಶ ಈಡೇರುತ್ತದೆ ಎಂದು ಅಧಿಕಾರಿಗಳಿಗೆ ಗೋವಿಂದ ಕಾರಜೋಳ ಸಲಹೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.