ETV Bharat / city

ಎಸಿಬಿ ದಾಳಿ: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರ ಬಂಧನ

author img

By

Published : Jul 2, 2022, 11:23 AM IST

ಭ್ರಷ್ಟಾಚಾರ ನಿಗ್ರಹ ದಳದಿಂದ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕನ ಬಂಧನವಾಗಿದ್ದು, ಹಣ ದುರ್ಬಳಕೆ ಮಾಡಿರುವ ಆರೋಪದಲ್ಲಿ ನಾಗರಾಜಪ್ಪನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

General Manager of Rajya Bhovi Development Corporation arrested, General Manager of Rajya Bhovi Development Corporation arrested news, Anti Corruption Bureau news, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಜನರಲ್ ಮ್ಯಾನೇಜರ್ ಬಂಧನ, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರ ಬಂಧನ ಸುದ್ದಿ, ಭ್ರಷ್ಟಾಚಾರ ನಿಗ್ರಹ ದಳ ಸುದ್ದಿ,
ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರ ಬಂಧನ

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪನನ್ನ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಬಂಧಿಸಿದೆ. ತಲಾ 5 ಲಕ್ಷದಂತೆ 15 ಜನ ಫಲಾನುಭವಿಗಳ ಸುಮಾರು 70 ಲಕ್ಷ ಹಣ ದುರ್ಬಳಕೆ ಮಾಡಿಕೊಂಡ ಆರೋಪ ನಾಗರಾಜಪ್ಪ ವಿರುದ್ಧ ಕೇಳಿ ಬಂದ ಹಿನ್ನೆಲೆ ಎಸಿಬಿ ದಾಳಿ ಮಾಡಿ ಬಂಧಿಸಿದೆ.

ಆರೋಪ ಕೇಳಿ ಬಂದ ಕೂಡಲೇ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಎಸಿಬಿ ಮೇ 15ರಂದು ಭೋವಿ ಅಭಿವೃದ್ಧಿ ನಿಗಮ ಹಾಗೂ ನಾಗರಾಜಪ್ಪನ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿತ್ತು. ತನಿಖೆ ವೇಳೆ, ಅಕ್ರಮವಾಗಿ ಪಲಾನುಭವಿಗಳ ಹೆಸರಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ ತಮ್ಮದೇ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡಿರೋದು ಪತ್ತೆಯಾಗಿತ್ತು.

ಓದಿ: ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಿಗೆ ಎಸಿಬಿ ಶಾಕ್

ಸಾಕ್ಷಿ ನಾಶಪಡಿಸುವ ಸಾಧ್ಯತೆ ಹಿನ್ನೆಲೆ ಸದ್ಯ ನಾಗರಾಜಪ್ಪನನ್ನ ಬಂಧಿಸಿರುವ ಎಸಿಬಿ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ. ಈ ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.