ETV Bharat / city

ರಾಜ್ಯದಲ್ಲಿ ಜು.25 ರವರೆಗೆ ಭಾರೀ ಮಳೆ... ಯಾವ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ?

author img

By

Published : Jul 22, 2021, 1:40 AM IST

rain
rain

ಜುಲೈ 25ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರು: ಬಂಗಾಳ ಉಪಸಾಗರದ ವಾಯುವ್ಯ ಭಾಗದಲ್ಲಿ ಜುಲೈ 23ರಂದು ವಾಯುಭಾರ ಕುಸಿತ ಉಂಟಾಗುವ ಹೆಚ್ಚಿನ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಜು.25ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಜು.22ರಂದು ಯೆಲ್ಲೋ ಅಲರ್ಟ್, ಜು.23 ಮತ್ತು 24ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜು.22, 23 ಮತ್ತು 24ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ವಿಜಯಪುರ, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜು.22 ಮತ್ತು 23 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಬುಧವಾರ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ, ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ 9 ಸೆಂ.ಮೀ, ಆಗುಂಬೆಯಲ್ಲಿ 8 ಸೆಂ.ಮೀ, ಉತ್ತರ ಕನ್ನಡದ ಕದ್ರಾ, ಶಿವಮೊಗ್ಗದ ತಾಳಗುಪ್ಪದಲ್ಲಿ ತಲಾ 7 ಸೆಂ.ಮೀ, ಉಡುಪಿಯ ಕೊಲ್ಲೂರಿನಲ್ಲಿ 6 ಸೆಂ.ಮೀ, ಉತ್ತರ ಕನ್ನಡದ ಸಿದ್ದಾಪುರ, ಧರ್ಮಸ್ಥಳ, ಶಿವಮೊಗ್ಗದ ಹೊಸನಗರದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.