ETV Bharat / city

ಕರ್ನಾಟಕ ಕೋವಿಡ್: ಇಂದು 214 ಹೊಸ ಕೇಸ್ ಪತ್ತೆ, 7 ಸೋಂಕಿತರು ಬಲಿ

author img

By

Published : Nov 5, 2021, 6:31 PM IST

corona
corona

ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆ ಆಗ್ತಿದ್ದು, ಸಾವಿನ ಪ್ರಮಾಣವೂ ಇಳಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿಂದು 80,145 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 214 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,89,489ಕ್ಕೆ ಏರಿಕೆ ಆಗಿದೆ.

ಇಂದು 286 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 29,43,170 ಸೋಂಕಿತರು ಗುಣಮುಖರಾಗಿದ್ದಾರೆ. 7 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 38,102 ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 8,188 ರಷ್ಟಿವೆ. ಸೋಂಕಿತರ ಪ್ರಮಾಣ ಶೇ.0.26 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.3.27 ರಷ್ಟಿದೆ.

ಇನ್ನು ರಾಜಧಾನಿ ಬೆಂಗಳೂರಲ್ಲಿ 118 ಮಂದಿಗೆ ಇಂದು ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,52,532ಕ್ಕೆ ಏರಿದೆ. 117 ಜನರು ಗುಣಮುಖರಾಗಿದ್ದಾರೆ. ಇಂದು ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,293 ಕ್ಕೆ ಏರಿದೆ. ಸದ್ಯ 6381 ಸಕ್ರಿಯ ಪ್ರಕರಣಗಳು ಇವೆ.

ರೂಪಾಂತರಿ ಅಪ್‌ಡೇಟ್:
ಅಲ್ಫಾ - 155
ಬೆಟಾ - 08
ಡೆಲ್ಟಾ - 1698
ಡೆಲ್ಟಾ ಪ್ಲಸ್ - 04
ಡೆಲ್ಟಾ ಸಬ್ ಲೈನ್ಏಜ್ - 256
ಡೆಲ್ಟಾ ಸಬ್ ಲೈನ್ಏಜ್ AY.12H -15
ಕಪ್ಪಾ - 160
ಈಟಾ - 01

ಸಾವಿನ ಸಂಖ್ಯೆ ಏರಿಳಿತ ಏಕೆ?

ರಾಜ್ಯದಲ್ಲಿ ದಿನ ಕಳೆದಂತೆ ಕೋವಿಡ್ ಸೋಂಕಿತರ ಸಂಖ್ಯೆ ಇಳಿಕೆಯಾಗ್ತಿದೆ. ಆದರೆ ಸಾವಿನ‌ ಪ್ರಮಾಣದಲ್ಲಿ ಏರಿಳಿತ ಮುಂದುವರೆದಿದೆ. ಹೀಗಾಗಿ ಸಾಂಕ್ರಾಮಿಕ ಸೋಂಕಿನ ತೀವ್ರತೆ ಹಾಗೂ ಸಾವು- ನೋವು ಕಡಿಮೆ ಆಗ್ತಿಲ್ವಾ? ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆ ಆಗ್ತಿದ್ದು, ಇದರೊಂದಿಗೆ ಸಾವಿನ ಪ್ರಮಾಣವೂ ಇಳಿಕೆಯಾಗಿದೆ. ಕೆಲ ಖಾಸಗಿ ಆಸ್ಪತ್ರೆಗಳು ತಡವಾಗಿ ಡೆತ್ ಕೇಸ್ ಅಪಡೇಡ್ ಮಾಡುತ್ತಿರುವುದರಿಂದ ಬುಲೆಟಿನ್​ನಲ್ಲಿ ಹಳೇ ಕೇಸುಗಳು ವರದಿ ಆಗ್ತಿವೆ. ಹೀಗಾಗಿ, ಸಾವಿನ ಪ್ರಮಾಣ ಏರಿಕೆ ಆಗ್ತಿದೆ ಅಂತ ಅನ್ನಿಸಬಹುದು, ಆದರೆ ಸಾವಿನ ಸಂಖ್ಯೆಯಲ್ಲಿ ಇಳಿಕೆ ಆಗ್ತಿದೆ ಅಂತ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.