ETV Bharat / city

ವಿಧಾನಪರಿಷತ್​, ರಾಜ್ಯಸಭೆಯ ತಲಾ 4 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್​

author img

By

Published : May 12, 2022, 5:29 PM IST

ರಾಜ್ಯ ವಿಧಾನಪರಿಷತ್ತಿನ 4 ಮತ್ತು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವ 4 ಸ್ಥಾನಗಳ ಚುನಾವಣೆಗೆ ಆಯೋಗ ಮುಹೂರ್ತ ಫಿಕ್ಸ್​ ಆಗಿದೆ.

karnataka-legislative
ಚುನಾವಣೆಗೆ ಮುಹೂರ್ತ ಫಿಕ್ಸ್​

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ತಿನ 2 ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳು ಸೇರಿ 4 ಸ್ಥಾನ ಮತ್ತು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಿಸಿದೆ. ವಿಧಾನಪರಿಷತ್ತಿಗೆ ಜೂನ್​ 13 ರಂದು ಮತದಾನ ನಡೆದರೆ, ಜೂನ್​ 10 ರಂದು ರಾಜ್ಯಸಭೆಗೆ ಚುನಾವಣೆ ನಡೆಯಲಿದೆ.

ವಾಯುವ್ಯ ಪದವೀಧರ ಕ್ಷೇತ್ರದ ನಿರಾಣಿ ಹನುಮಂತಪ್ಪ ರುದ್ರಪ್ಪ, ದಕ್ಷಿಣ ಪದವೀಧರ ಕ್ಷೇತ್ರದ ಕೆ.ಟಿ ಶ್ರೀಕಂಠೇಗೌಡ ಅವರ ಅವಧಿ ಜುಲೈ 4ಕ್ಕೆ ಮುಗಿಯಲಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಅರುಣ್​ ಶಹಾಪುರ್, ದಕ್ಷಿಣ ಶಿಕ್ಷಕರ ಕ್ಷೇತ್ರದ ಬಸವರಾಜ್​ ಹೊರಟ್ಟಿ ಅವರಿಂದ ತೆರವಾಗುವ ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದೆ.

ಮೇ 26 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ, 27ರಂದು ನಾಮಪತ್ರಗಳ ಪರಿಶೀಲನೆ, 30 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 13ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜೂ.15 ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಜೂನ್​ 10 ಕ್ಕೆ ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ಜೈರಾಂ ರಮೇಶ್ ಅವರ ಅವಧಿಯು ಜೂನ್​ 30 ರಂದು ಕೊನೆಯಾಗಲಿದೆ. ಅಲ್ಲದೇ ಆಸ್ಕರ್ ಫರ್ನಾಂಡೀಸ್ ಅವರ ನಿಧನದಿಂದ ತೆರವಾಗಿರುವ ಸ್ಥಾನ ಸೇರಿದಂತೆ ನಾಲ್ಕು ಸ್ಥಾನಗಳಿಗೂ ಆಯೋಗ ಮುಹೂರ್ತ ಚುನಾವಣೆ ನಿಗದಿ​ ಮಾಡಿದೆ.

ಈ ಸ್ಥಾನಗಳಿಗೆ ಜೂನ್​ 10 ರಂದು ಚುನಾವಣೆ ನಡೆಯಲಿದ್ದು, ಮೇ 24ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂ.1 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 3 ರಂದು ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 10 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಓದಿ: ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.