ETV Bharat / city

ಅವರವರ ಪಾರ್ಟಿ ವಿಚಾರ ಅವರವರಿಗೆ..  ಬೈಎಲೆಕ್ಷನ್‌ನಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ.. ಡಿಕೆಶಿ

author img

By

Published : Sep 30, 2020, 4:56 PM IST

ನಾನು ಕೆಪಿಸಿಸಿ ಅಧ್ಯಕ್ಷ ಆಗಿದ್ದರೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಈ ಹಿಂದೆ ಕೂಡ ಚುನಾವಣೆಗೆ ಕೆಲಸ ಮಾಡಿದ್ದೇವೆ, ಈಗಲೂ ಮಾಡುತ್ತೇವೆ..

KPCC President DK Shivakumar  reaction about By-election
ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತೇವೆ: ಡಿಕೆಶಿ

ಬೆಂಗಳೂರು: ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತೇವೆ: ಡಿಕೆಶಿ

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಘೋಷಣೆಯಾಗಿದೆ. ಈಗಾಗಲೇ ಕ್ಷೇತ್ರದ ನಾಯಕರ ಜೊತೆಗೆ ಒಂದು ಸುತ್ತು ಮಾತನಾಡಿದ್ದೇವೆ. ಆರ್‌ಆರ್​ನಗರ ಉಪ ಚುನಾವಣೆ ಪ್ರತಿಷ್ಠೆ ಏನೂ ಇಲ್ಲ. ಚುನಾವಣೆ ನಡೆಯುವ ಪ್ರತೀ ಕ್ಷೇತ್ರ ಪ್ರತಿಷ್ಠೆ. ಎಲ್ಲರಿಗೂ ಜವಾಬ್ದಾರಿಯಿದೆ.

ನಾನು ಕೆಪಿಸಿಸಿ ಅಧ್ಯಕ್ಷ ಆಗಿದ್ದರೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಈ ಹಿಂದೆ ಕೂಡ ಚುನಾವಣೆಗೆ ಕೆಲಸ ಮಾಡಿದ್ದೇವೆ, ಈಗಲೂ ಮಾಡುತ್ತೇವೆ ಎಂದರು. ಆರ್‌ಆರ್​ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತೇವೆ.

ಸದ್ಯ ರಾಜರಾಜೇಶ್ವರಿನಗರ ಕ್ಷೇತ್ರದ ಟಿಕೆಟ್​ಗೆ ಯಾರೂ ಅರ್ಜಿ ಹಾಕಿಲ್ಲ. ಚುನಾವಣೆಯಲ್ಲಿ ಯಾರ ಜೊತೆಗೂ ಹೊಂದಾಣಿಕೆಯಿಲ್ಲ. ಅವರವರ ಪಾರ್ಟಿ ವಿಚಾರ ಅವರವರಿಗೆ ಎಂದು ತಿಳಿಸಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪಿನ ವಿಚಾರವಾಗಿ ಮಾತನಾಡಿ, ಈ ವಿಷಯದಲ್ಲಿ ಇಡೀ ದೇಶದಲ್ಲಿ ಒಂದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಬೇಕು ಅಂತಾ ನಮ್ಮ ರಾಷ್ಟ್ರೀಯ ನಾಯಕರು ಹೇಳಿದ್ದಾರೆ. ಹೈಕಮಾಂಡ್ ಮಾತನಾಡಿದ ನಂತರ ನಾವು ಈ ಕುರಿತು ಮಾತನಾಡುತ್ತೇವೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.