ETV Bharat / city

ದೇಶದ್ರೋಹ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳ ಪರ ಹೈಕೋರ್ಟ್ ಗೆ ಪಿಐಎಲ್‌ ಸಲ್ಲಿಕೆ

author img

By

Published : Feb 18, 2020, 9:52 PM IST

ದೇಶದ್ರೋಹ ಆರೋಪ ಪ್ರಕರಣದಲ್ಲಿ ಬಂಧಿಸಲಾಗಿರುವ ಕಾಶ್ಮೀರಿ ವಿದ್ಯಾರ್ಥಿಗಳ ಪರ ಯಾವುದೇ ವಕೀಲ ವಕಾಲತ್ತು ಹಾಕದಂತೆ ಹುಬ್ಬಳ್ಳಿ ವಕೀಲರ ಸಂಘ ಕೈಗೊಂಡಿರುವ ನಿರ್ಣಯ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

kn_bng_04_Court_sedition_PIL_7208962
ದೇಶದ್ರೋಹ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳ ಪರ ಹೈಕೋರ್ಟ್ ಗೆ ಪಿಐಎಲ್‌ ಸಲ್ಲಿಸಿದ ವಕೀಲರು

ಬೆಂಗಳೂರು: ದೇಶದ್ರೋಹ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಕಾಶ್ಮೀರಿ ವಿದ್ಯಾರ್ಥಿಗಳ ಪರ ಯಾವುದೇ ವಕೀಲರು ವಕಾಲತ್ತು ಹಾಕದಂತೆ ಹುಬ್ಬಳ್ಳಿ ವಕೀಲರ ಸಂಘ ಕೈಗೊಂಡಿರುವ ನಿರ್ಣಯ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಹುಬ್ಬಳ್ಳಿ ವಕೀಲರ ಸಂಘದ ನಿರ್ಣಯ ಸಂವಿಧಾನದ ವಿಧಿ 21 ಮತ್ತು 22ರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದ್ದು, ಅದನ್ನು ರದ್ದುಪಡಿಸುವಂತೆ ಕೋರಿ ವಕೀಲ ಬಿ.ಟಿ.ವೆಂಕಟೇಶ್ ಸೇರಿ 24 ವಕೀಲರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ. ಪ್ರತಿವಾದಿಗಳಾಗಿ ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಹುಬ್ಬಳ್ಳಿ ಪೊಲೀಸ್ ಕಮಿಷನರ್, ಹುಬ್ಬಳ್ಳಿ ವಕೀಲರ ಸಂಘ ಹಾಗೂ ರಾಜ್ಯ ವಕೀಲರ ಪರಿಷತ್ತನ್ನು ಸೇರಿಸಲಾಗಿದೆ. ಅರ್ಜಿ ವಿಚಾರಣೆಯನ್ನು ಫೆ.20ಕ್ಕೆ ನಿಗದಿಪಡಿಸಲಾಗಿದೆ.

ಅರ್ಜಿಯಲ್ಲಿ, ವಕೀಲರ ಸಂಘ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮಾಡಿರುವ ನಿರ್ಣಯ ರದ್ದುಪಡಿಸುವಂತೆ ರಾಜ್ಯ ವಕೀಲರ ಪರಿಷತ್ತಿಗೆ ನಿರ್ದೇಶಿಸಬೇಕು. ಆರೋಪಿಗಳನ್ನು ಪ್ರತಿನಿಧಿಸಲು ಮುಂದಾಗುವ ವಕೀಲರಿಗೆ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸರಿಗೆ ನಿರ್ದೇಶಿಸಬೇಕು. ಇನ್ನು ಆರೋಪಿಗಳನ್ನು ಬಂಧಿಸಿ ಸ್ಥಳೀಯ ಕೋರ್ಟ್ ಗೆ ಹಾಜರುಪಡಿಸಿದ ವೇಳೆ ಕೆಲ ವ್ಯಕ್ತಿಗಳು ದಾಳಿಗೆ ಪ್ರಯತ್ನಿಸಿದ್ದಾರೆ. ಈ ಘಟನೆ ಕುರಿತಂತೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ಹಾಗೆಯೇ ಆರೋಪಿಗಳ ಮೇಲಿನ ಹಲ್ಲೆ ಬಗ್ಗೆ ಎಫ್ಐಆರ್ ದಾಖಲಿಸಲು ಕೂಡಲೇ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿರುವ ಅರ್ಜಿದಾರ ವಕೀಲರು, ಪಿಐಎಲ್ ನ್ನು ತುರ್ತು ವಿಚಾರಣೆಗೆ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.