ETV Bharat / city

ಬೆಂಗಳೂರು: ವಾಟರ್ ಟ್ಯಾಂಕರ್ ಹರಿದು ವ್ಯಕ್ತಿ ಸಾವು

author img

By

Published : Dec 7, 2021, 12:09 PM IST

ವಾಟರ್ ಟ್ಯಾಂಕರ್ ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

man died by accident in bangalore
ಬೆಂಗಳೂರಿನಲ್ಲಿ ರಸ್ತೆ ಅಪಘಾತ

ಬೆಂಗಳೂರು: ವಾಟರ್ ಟ್ಯಾಂಕರ್ ಹರಿದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಹೆಚ್.ಎಸ್.ಆರ್ ಲೇಔಟ್​ನ 27ನೇ ಮುಖ್ಯ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಹೆಚ್.ಎಸ್.ಆರ್ ಲೇಔಟ್ ಬಳಿ ವಾಟರ್ ಟ್ಯಾಂಕರ್‌ವೊಂದರ ಪಕ್ಕದಲ್ಲೇ ಬೈಕ್ ಸವಾರ ಹೋಗುತ್ತಿದ್ದ. ಈ ವೇಳೆ ಟ್ಯಾಂಕರ್ ಚಾಲಕ ದಿಢೀರ್‌ ಆಗಿ ವಾಹನವನ್ನು ಎಡಕ್ಕೆ ತಿರುಗಿಸಿದ್ದಾನೆ. ಪರಿಣಾಮ, ಬೈಕ್​ಗೆ ಟ್ಯಾಂಕರ್ ಗುದ್ದಿದ್ದು, ಬೈಕ್ ಫುಟ್‌ಪಾತ್​ನ ಬದಿಗೆ ತಾಗಿತು. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ಸವಾರ ರಸ್ತೆಯ ಬಲಭಾಗಕ್ಕೆ ಬಿದ್ದಿದ್ದಾನೆ. ಟ್ಯಾಂಕರ್ ಚಕ್ರದಡಿ ಸಿಲುಕಿದ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಹಿಟ್​ ಆ್ಯಂಡ್​ ರನ್ ಕೇಸ್​: ಪತ್ನಿ ಸ್ಥಳದಲ್ಲೇ ಸಾವು, ಪತಿ-ಮಗುವಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.