ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಪುತ್ರಿ ರಕ್ಷಿತಾ ಹಾಗೂ ಹೈದ್ರಾಬಾದ್ ಉದ್ಯಮಿ ರವಿಕುಮಾರ್ ಪುತ್ರ ಲಲಿತ್ ಕುಮಾರ್ ಜೊತೆ ಇಂದು ವಿವಾಹ ನಿಶ್ಚಿತಾರ್ಥ ನಡೆಯಿತು.
ನಗರದ ರೇಸ್ ಕೋರ್ಸ್ ರಸ್ತೆಯ ತಾಜ್ ಹೋಟೆಲ್ ನಲ್ಲಿ ಗಣ್ಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರ ಪುತ್ರಿಯ ನಿಶ್ಚಿತಾರ್ಥ ಸಮಾರಂಭದಲ್ಲಿ ಪಾಲ್ಗೊಂಡು ಭಾವಿ ವಧು-ವರರಿಗೆ ಶುಭ ಹಾರೈಸಿದರು.