ETV Bharat / city

ಆನೇಕಲ್‌: ಕುಡಿದ ಮತ್ತಿನಲ್ಲಿ ಮಹಿಳೆಯ‌ ಕೊಲೆಗೈದ ವ್ಯಕ್ತಿ

author img

By

Published : Aug 2, 2022, 5:08 PM IST

murder of a Tamil Nadu woman in Bangalore
ಕುಡಿತದ ಮತ್ತಿನಲ್ಲಿ ಮಹಿಳೆಯ‌ ಬೀಕರ ಕೊಲೆ

ಆನೇಕಲ್ ಉಪ ವಿಭಾಗದ ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಮಿಳುನಾಡು ಮೂಲದ ಮಹಿಳೆ ಕೊಲೆಯಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಆನೇಕಲ್(ಬೆಂಗಳೂರು): ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ಉಪ ವಿಭಾಗದ ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಕೊಲೆ ನಡೆದಿದೆ. ತಮಿಳುನಾಡು ಮೂಲದ ಮಾದಮ್ಮ(45) ಕೊಲೆಯಾದವರು. ಮಣಿ ಎಂಬ ಪುರುಷನೊಂದಿಗೆ ಈಕೆ ವಾಸವಿದ್ದರು. ಇಂದು ಮಧ್ಯಾಹ್ನ ಕಂಠಪೂರ್ತಿ ಕುಡಿದು ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕಕ್ಕೇರಿ ಕೊಲೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಡ್ರಗ್ಸ್​ಗೆ ವ್ಯಸನಕ್ಕೆ ಯುವಕ ಬಲಿ; ಇದ್ದೊಬ್ಬ ಮಗನನ್ನೂ ಕಳೆದುಕೊಂಡ ಪೋಷಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.