2016ರ ಮೈಸೂರು ಕೋರ್ಟ್‌ನಲ್ಲಿನ ಬಾಂಬ್ ಬ್ಲಾಸ್ಟ್.. ಮೂವರು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ..

author img

By

Published : Oct 11, 2021, 9:11 PM IST

Updated : Oct 11, 2021, 9:23 PM IST

Mysuru court blast

2016 ಆಗಸ್ಟ್ 6ರಂದು ಮೈಸೂರು ಜಿಲ್ಲಾ ನ್ಯಾಯಾಲಯದ ಶೌಚಾಲಯದಲ್ಲಿ ಅಡುಗೆ ಕುಕ್ಕರಿನಲ್ಲಿ ಬಾಂಬ್ ಇಟ್ಟು ಆರೋಪಿಗಳು ಸ್ಫೋಟಿಸಿದ್ದರು. ಬ್ಯಾಟರಿ, ಗ್ಲಾಸ್ ಪೀಸ್, ಪಟಾಕಿ ಪೌಡರ್, ಕೆಮಿಕಲ್ ಬಳಸಿ ಬಾಂಬ್ ತಯಾರಿಸಿದ್ದರು..

ಬೆಂಗಳೂರು : 2016ರ ಮೈಸೂರು ಬಾಂಬ್ ಸ್ಫೋಟ ಪ್ರಕರಣದ ಮೂವರು ಅಪರಾಧಿಗಳಿಗೂ ಇಂದು ಎನ್ಐಎ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿ ತೀರ್ಪು ನೀಡಿದೆ.

ಈಗಾಗಲೇ ನೈನಾರ್ ಅಬ್ಬಾಸ್ ಅಲಿ, ಅಬ್ದುಲ್ ಕರೀಂ ಹಾಗೂ ದಾವೂದ್ ಸುಲೈಮಾನ್ ಈ ಮೂವರು ಪ್ರಕರಣದಲ್ಲಿ ಅಪರಾಧಿಗಳೆಂದು ಕೋರ್ಟ್ ಆದೇಶಿಸಿತ್ತು.

ನೈನಾರ್​​ ಅಬ್ಬಾಸ್​ಗೆ 10 ವರ್ಷ ಜೈಲು, ₹43,000 ದಂಡ. ಅಬ್ದುಲ್​ ಕರೀಂ​ಗೆ​​​ 5 ವರ್ಷಗಳ ಸಾಧಾರಣ ಜೈಲು ಶಿಕ್ಷೆ ಜತೆಗೆ ₹25,000 ದಂಡ ಹಾಗೂ ಸುಲೈಮಾನ್​​​ಗೆ 10 ವರ್ಷಗಳ ಜೈಲು ಶಿಕ್ಷೆಯೊಂದಿಗೆ 38,000 ಸಾವಿರ ರೂ. ದಂಡ ವಿಧಿಸಿ ಕೋರ್ಟ್‌ ಆದೇಶಿಸಿದೆ. ಇದರಲ್ಲಿ 7 ವರ್ಷಗಳ ಕಠಿಣ ಶಿಕ್ಷೆ ಹಾಗೂ 3 ವರ್ಷಗಳ ಸಾಧಾರಣ ಶಿಕ್ಷೆಯನ್ನೂ ವಿಧಿಸಲಾಗಿದೆ.

  • NIA Special Court, Bengaluru has sentenced three convicted Al Qaeda- Base Movement terrorists to imprisonment in the 2016 Mysuru Court blast case. pic.twitter.com/v41iQhXABC

    — ANI (@ANI) October 11, 2021 " class="align-text-top noRightClick twitterSection" data=" ">

ನ್ಯಾ. ಕಸನಪ್ಪ ನಾಯ್ಕ್ ಅವರಿಂದ್ದ ಪೀಠ ಈ ತೀರ್ಪು ನೀಡಿದೆ. ತಮಿಳುನಾಡು ಮೂಲದ A1 ಅಬ್ಬಾಸ್ ಅಲಿ, A ಸಂಸುನ್ ಕರೀ ರಾಜಾ, A5 ದಾವೂದ್ ಸುಲೇಮಾನ್ ತಪ್ಪಿತಸ್ಥರೆಂದು ಈಗಾಗಲೇ ಕೋರ್ಟ್​ ತೀರ್ಪು ನೀಡಿತ್ತು. ಆರೋಪಿಗಳು 'ಬೇಸ್ ಮೂವ್​ಮೆಂಟ್​' ಎಂಬ ಸಂಘಟನೆ ಕಟ್ಟಿಕೊಂಡು ಅಲ್-ಕೈದಾ ಸಂಘಟನೆಗೆ ಬೆಂಬಲ ನೀಡುತ್ತಿದ್ದರು ಎಂದು ವಿಚಾರಣೆ ವೇಳೆ ಸಾಬೀತಾಗಿದೆ.

ಇದನ್ನೂ ಓದಿರಿ: 2016ರ ಮೈಸೂರು ಕೋರ್ಟ್‌ನಲ್ಲಿನ ಬಾಂಬ್ ಬ್ಲಾಸ್ಟ್.. ಮೂವರು ತಪ್ಪಿತಸ್ಥರೆಂದು ತೀರ್ಪು..

ಪ್ರಕರಣದ ಹಿನ್ನೆಲೆ: 2016 ಆಗಸ್ಟ್ 6ರಂದು ಮೈಸೂರು ಜಿಲ್ಲಾ ನ್ಯಾಯಾಲಯದ ಶೌಚಾಲಯದಲ್ಲಿ ಅಡುಗೆ ಕುಕ್ಕರಿನಲ್ಲಿ ಬಾಂಬ್ ಇಟ್ಟು ಆರೋಪಿಗಳು ಸ್ಫೋಟಿಸಿದ್ದರು. ಬ್ಯಾಟರಿ, ಗ್ಲಾಸ್ ಪೀಸ್, ಪಟಾಕಿ ಪೌಡರ್, ಕೆಮಿಕಲ್ ಬಳಸಿ ಬಾಂಬ್ ತಯಾರಿಸಿದ್ದರು. A3 ಆಯೂಬ್​ಗೆ ಗೊತ್ತಿಲ್ಲದೇ ಅವನ ಮನೆಯಲ್ಲಿ ಬಾಂಬ್​ ತಯಾರು ಮಾಡಿದ್ದ ಹಿನ್ನೆಲೆ ಹೈಕೋರ್ಟ್ ವಾದ ಆಲಿಸಿ ಕ್ಷಮಾದಾನ ನೀಡಿತ್ತು. ತನಿಖಾ ವೇಳೆ A4 ಪಾತ್ರ ಇಲ್ಲ ಎಂದು ಚಾರ್ಜ್‌ಶೀಟ್​ನಲ್ಲಿ ಕೈಬಿಡಲಾಗಿತ್ತು.

Last Updated :Oct 11, 2021, 9:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.