ETV Bharat / city

ಬೆಂಗಳೂರಲ್ಲಿ ತಿರುಪತಿ ದೇವಾಲಯ ಹೋಲುವ ಇಸ್ಕಾನ್ ದೇಗುಲ: ಜೂ.14 ರಂದು ರಾಷ್ಟ್ರಪತಿಗಳಿಂದ ಲೋಕಾರ್ಪಣೆ

author img

By

Published : Jun 7, 2022, 10:04 AM IST

ರಾಷ್ಟ್ರಪತಿ
ರಾಷ್ಟ್ರಪತಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜೂ.13 ಮತ್ತು 14 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಬೆಂಗಳೂರು: ಮುಂದಿನ ವಾರ ಜೂನ್ 13 ಮತ್ತು 14 ರಂದು ಎರಡು ದಿನಗಳ ಪ್ರವಾಸಕ್ಕಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಜೂನ್ 13 ರಂದು ಸೋಮವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ರಾಷ್ಟ್ರಪತಿಯವರು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಂಗಳವಾರ ಜೂನ್ 14ರಂದು ರಾಷ್ಟ್ರಪತಿಯವರು ಬೆಂಗಳೂರು ಹೊರವಲಯದ ಕನಕಪುರ ರಸ್ತೆ ಸಮೀಪದ ದೊಡ್ಡ ಕಲ್ಲಸಂದ್ರ ಬಳಿಯ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎರಡೂ ದಿನ ರಾಷ್ಟ್ರಪತಿಯವರು ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದು, ಜೂನ್ 14 ರಂದು ಇಸ್ಕಾನ್ ಕಾರ್ಯಕ್ರಮದ ಬಳಿಕ ದೆಹಲಿಗೆ ತೆರಳಲಿದ್ದಾರೆ.

(ಇದನ್ನೂ ಓದಿ: ಕೊರೊನಾದಿಂದ ಅನಾಥೆಯಾದ ಬಾಲಕಿಗೆ 29 ಲಕ್ಷ ಸಾಲ ಕಟ್ಟುವಂತೆ ಬ್ಯಾಂಕ್ ನೋಟಿಸ್... ಮುಂದೇನಾಯ್ತು ಅಂದ್ರೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.