ಸಿದ್ಧಾಂತಗಳೊಂದಿಗೆ ರಾಜಿಯಾಗಲ್ಲ, ಸಿದ್ದರಾಮಯ್ಯರನ್ನು ಭೇಟಿ ಮಾಡಿಲ್ಲ: ಬಿಎಸ್​ವೈ

author img

By

Published : Oct 13, 2021, 4:42 PM IST

Updated : Oct 13, 2021, 5:20 PM IST

ydiyurappa and siddaramaiah

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ನಾನು ಭೇಟಿ ಮಾಡಿಲ್ಲ, ಅದರ ಅಗತ್ಯತೆಯೂ ನನಗಿಲ್ಲ. ಮಾಧ್ಯಮಗಳಲ್ಲಿ ಬಂದಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಅರ್ಥರಹಿತವಾಗಿದೆ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ನಂಬಿದ ಸಿದ್ಧಾಂತಗಳೊಂದಿಗೆ ರಾಜಿಯಾಗಿಲ್ಲ, ರಾಜಿಯಾಗುವುದೂ ಇಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ನಾನು ಭೇಟಿ ಮಾಡಿಲ್ಲ, ಅದರ ಅಗತ್ಯತೆಯೂ ನನಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

  • ಈ ಗುರಿ ತಲುಪುವ ತನಕ ನಾನು ವಿಶ್ರಮಿಸುವುದಿಲ್ಲ. ನಂಬಿದ ಸಿದ್ಧಾಂತಗಳೊಂದಿಗೆ ನಾನೆಂದಿಗೂ ರಾಜಿಯಾಗಿಲ್ಲ, ಆಗುವುದೂ ಇಲ್ಲ. ಹಾಗೆಯೇ ಶ್ರೀ ಸಿದ್ದರಾಮಯ್ಯನವರು ಕೂಡ ಭೇಟಿಯಾಗಿಲ್ಲವೆಂದು ಸ್ಪಷ್ಟಪಡಿಸಿರುವುದರಿಂದ ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಅರ್ಥರಹಿತವಾಗಿದೆ ಎಂದು ಸ್ಪಷ್ಟಪಡಿಸುತ್ತಿದ್ದೇನೆ. (2/2)

    — B.S. Yediyurappa (@BSYBJP) October 13, 2021 " class="align-text-top noRightClick twitterSection" data=" ">

2020ರ ಫೆಬ್ರವರಿ 27ರಂದು ನಡೆದ ನನ್ನ ಜನ್ಮದಿನದ ಕಾರ್ಯಕ್ರಮ ಹೊರತುಪಡಿಸಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ನಾನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ. ಹಾಗೆ ಭೇಟಿ ಮಾಡುವ ಅಗತ್ಯವೂ ನನಗಿಲ್ಲ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ಪಕ್ಷದಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ಗುರಿ ತಲುಪುವ ತನಕ ನಾನು ವಿಶ್ರಮಿಸುವುದಿಲ್ಲ ಎಂದು ಹೇಳಿದ್ದಾರೆ.

ನಂಬಿದ ಸಿದ್ಧಾಂತಗಳೊಂದಿಗೆ ನಾನೆಂದಿಗೂ ರಾಜಿಯಾಗಿಲ್ಲ, ಆಗುವುದೂ ಇಲ್ಲ. ಹಾಗೆಯೇ ಸಿದ್ದರಾಮಯ್ಯನವರು ಕೂಡ ಭೇಟಿಯಾಗಿಲ್ಲವೆಂದು ಸ್ಪಷ್ಟಪಡಿಸಿರುವುದರಿಂದ ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಅರ್ಥರಹಿತವಾಗಿದೆ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದು ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 'ನಾನು ಬಿಎಸ್​ವೈ ಭೇಟಿಯಾಗಿರುವುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ'

Last Updated :Oct 13, 2021, 5:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.