ETV Bharat / city

ಮೀಸಲಾತಿ ವಿರೋಧಿಸುತ್ತಿದ್ದವರೇ ಈಗ ಮೀಸಲಾತಿ ಪರವಾಗಿದ್ದಾರೆ : ಸಿದ್ದರಾಮಯ್ಯ

author img

By

Published : Oct 3, 2021, 5:33 PM IST

ಸಂವಿಧಾನವು ಸಮಾನತೆಗೆ ಅವಕಾಶ ನೀಡಿರುವುದರಿಂದ ಇಂದು ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುತ್ತಾರೆ. ಇಂಥವರ ಬಗ್ಗೆ ತಳ ಸಮುದಾಯಗಳು ಜಾಗ್ರತೆ ವಹಿಸಬೇಕು. ಹಿಂದೆ ಮೀಸಲಾತಿ ವಿರೋಧಿಸುತ್ತಿದ್ದವರು ಈಗ ಅದರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದಾರೆ. ಇದಕ್ಕೆ ಕಾರಣ ಸಮಾಜದ ಎಲ್ಲಾ ಜಾತಿಗಳು ಮೀಸಲಾತಿ ಅಡಿಯಲ್ಲಿ ಬಂದಿರುವುದು. ಮೀಸಲಾತಿ ಈಗ 60% ಆಗಿದೆ. ಮೇಲ್ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೂ 10% ಮೀಸಲಾತಿ ಕಲ್ಪಿಸಲಾಗಿದೆ..

siddaramaiah-statement-participated-in-ganiga-community-work-shop
ಸಿದ್ದರಾಮಯ್ಯ

ದೇವನಹಳ್ಳಿ : ಈ ಹಿಂದೆ ಯಾರು ಮೀಸಲಾತಿ ವಿರೋಧಿಸುತ್ತಿದ್ದರೋ, ಈಗ ಅವರು ಅದರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದಾರೆ. ಇದಕ್ಕೆ ಕಾರಣ ಸಮಾಜದ ಎಲ್ಲಾ ಜಾತಿಗಳು ಮೀಸಲಾತಿ ಅಡಿಯಲ್ಲಿ ಬಂದಿರುವುದು. ಮೀಸಲಾತಿ ಈಗ 60%ರಷ್ಟು ಇದ್ದು, ಮೇಲ್ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೂ 10% ಮೀಸಲಾತಿ ಕಲ್ಪಿಸಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಇಂದು ಆಯೋಜಿಸಿದ್ದ ಗಾಣಿಗ ಸಮುದಾಯದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅವಕಾಶದಿಂದ ವಂಚಿತರಾದ ಜಾತಿಗಳು ಜಾತಿ ಸಮ್ಮೇಳನಗಳನ್ನು ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರೆ ಅದು ಜಾತೀಯತೆಯಾಗಲ್ಲ, ಸಮಾಜದ ಸಂಪತ್ತನ್ನು ಅನುಭವಿಸುವ ಸಮುದಾಯಗಳು ಜಾತಿ ಸಮ್ಮೇಳನಗಳನ್ನು ನಡೆಸಿದರೆ ಮಾತ್ರ ಅದು ಜಾತೀಯತೆ ಆಗುತ್ತದೆ ಎಂದು ಲೋಹಿಯಾ ಹೇಳಿದ್ದಾರೆ.

ನನ್ನ ತಂದೆ, ತಾಯಿ ಶಿಕ್ಷಣದಿಂದ ವಂಚಿತರಾಗಿದ್ದರು. ನಾನು ಕಾನೂನು ಪದವಿ ಗಳಿಸಿದ್ದಕ್ಕೆ ಇಂದು ಸಮಾಜದಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡಲು ಸಾಧ್ಯವಾಗಿದೆ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. 'ಶಿಕ್ಷಣ, ಸಂಘಟನೆ ಮತ್ತು ಹೋರಾಟ' ಎಂಬ ಮೂರು ಸೂತ್ರಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶೋಷಿತ ವರ್ಗದ ಜನರಿಗೆ ನೀಡಿದ್ದಾರೆ. ಒಂದು ವೇಳೆ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗದೆ ಹೋಗಿದ್ದರೆ ನಮಗೆ ಇಂಥಾ ಶ್ರೇಷ್ಠ ಸಂವಿಧಾನ ಸಿಗುತ್ತಿರಲಿಲ್ಲ.

ಸಂವಿಧಾನವು ಸಮಾನತೆಗೆ ಅವಕಾಶ ನೀಡಿರುವುದರಿಂದ ಇಂದು ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುತ್ತಾರೆ. ಇಂಥವರ ಬಗ್ಗೆ ತಳ ಸಮುದಾಯಗಳು ಜಾಗ್ರತೆ ವಹಿಸಬೇಕು. ಹಿಂದೆ ಮೀಸಲಾತಿ ವಿರೋಧಿಸುತ್ತಿದ್ದವರು ಈಗ ಅದರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದಾರೆ. ಇದಕ್ಕೆ ಕಾರಣ ಸಮಾಜದ ಎಲ್ಲಾ ಜಾತಿಗಳು ಮೀಸಲಾತಿ ಅಡಿಯಲ್ಲಿ ಬಂದಿರುವುದು. ಮೀಸಲಾತಿ ಈಗ 60% ಆಗಿದೆ. ಮೇಲ್ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೂ 10% ಮೀಸಲಾತಿ ಕಲ್ಪಿಸಲಾಗಿದೆ.

ಗಾಣಿಗರು ಉದ್ಯೋಗ ಪಡೆಯುವ ಪ್ರಯತ್ನ ಮಾಡಿ: ಗಾಣಿಗರು ಬಹಳ ಹಿಂದುಳಿದ ಸಮಾಜದವರು. ಈಗ ಆಧುನಿಕ ಯಂತ್ರಗಳು ಬಂದಮೇಲೆ ಈ ಸಮಾಜದ ಉದ್ಯೋಗವನ್ನು ಕಸಿದುಕೊಂಡಿದೆ. ಈ ಸಮಾಜದವರು ಬರೀ ಎಣ್ಣೆ ತೆಗಿಯುವ ಉದ್ಯೋಗಕ್ಕೆ ಜೋತುಬೀಳದೆ ಶಿಕ್ಷಣದ ಕಡೆಗೆ ಹೆಚ್ಚು ಮಹತ್ವ ನೀಡಿ, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ಪಡೆಯುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡುತ್ತೇನೆ.

ಜಾತಿಯಿಂದ ಯಾರೂ ಬುದ್ದಿವಂತರೂ ಅಲ್ಲ, ದೊಡ್ಡವರೂ ಅಲ್ಲ. ರಾಮಾಯಣ, ಮಹಾಭಾರತ ಬರೆದವರು ಕೂಡ ಸಮಾಜದಿಂದ ಶೋಷಣೆಗೊಳಪಟ್ಟ ಜಾತಿಗೆ ಸೇರಿದವರೆ. ಹೀಗಾಗಿ, ಜಾತಿಯಿಂದ ಜ್ಞಾನ, ಸಾಮರ್ಥ್ಯ ನಿರ್ಧಾರಿತವಾಗಲ್ಲ ಎಂಬುದನ್ನು ಎಲ್ಲರೂ ನೆನಪಿನಲ್ಲಿಟ್ಟುಕೊಂಡು ಸಾಧನೆಯ ಕಡೆಗೆ ಗಮನ ನೀಡಬೇಕು ಎಂದು ಕಾರ್ಯಾಗಾರದಲ್ಲಿದ್ದ ಜನರಿಗೆ ಸಿದ್ದರಾಮಯ್ಯ ಸಲಹೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.