ETV Bharat / city

ವೃದ್ಧೆಯ ತಲೆ ಒಡೆದು ಸರ ದೋಚಿದ ಆರೋಪಿ ಭದ್ರಾವತಿಯಲ್ಲಿ ನೇಣಿಗೆ ಶರಣು

author img

By

Published : May 2, 2022, 10:25 AM IST

ಬೆಂಗಳೂರಿನ ಬ್ಯಾಡರಹಳ್ಳಿಯ ವಿದ್ಯಮಾನ ನಗರದಲ್ಲಿ ಬಾಡಿಗೆ ಕೇಳುವ ನೆಪದಲ್ಲಿ ಒಂಟಿ ವೃದ್ಧೆಗೆ ಹಲ್ಲೆ ನಡೆಸಿ ಚಿನ್ನದ ಸರದೊಂದಿಗೆ ಪರಾರಿಯಾಗಿದ್ದ ವ್ಯಕ್ತಿ ಭದ್ರಾವತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

suicide-of-the-man-who-is-accused-in-robbery-in-banglore
ಸಾಲ ತೀರಿಸಲು ವೃದ್ಧೆಯ ತಲೆ ಒಡೆದವನು ಭದ್ರಾವತಿಯಲ್ಲಿ ನೇಣಿಗೆ ಶರಣು

ಬೆಂಗಳೂರು: ಬೆಂಗಳೂರಿನಲ್ಲಿ ವೃದ್ಧೆಯ ತಲೆ ಒಡೆದು ಚಿನ್ನದ ಸರ ದರೋಡೆ ಮಾಡಿ ಪರಾರಿಯಾಗಿದ್ದ ಆರೋಪಿ ಭದ್ರಾವತಿಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ರಾಜೇಂದ್ರ ಎಂದು ಗುರುತಿಸಲಾಗಿದೆ. ಐಪಿಎಲ್ ಬೆಟ್ಟಿಂಗ್, ಜೂಜಾಟ ಮುಂತಾದವುಗಳಲ್ಲಿ ತೊಡಗಿದ್ದ ಆರೋಪಿ ರಾಜೇಂದ್ರ ಕೋಟಿ ಕೋಟಿ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ಹೆಂಡತಿ ಒಡವೆಗಳನ್ನು ಅಡವಿಟ್ಟಿದ್ದ ಎಂದು ತಿಳಿದುಬಂದಿದೆ.

ಒಂದು ಕಡೆ ಸಾಲಗಾರರ‌ ಕಾಟ ಇನ್ನೊಂದೆಡೆ ಒಡವೆ ಬಿಡಿಸಿ ಕೊಡಿ ಎಂದು ಹೆಂಡತಿ ಒತ್ತಾಯ ಮಾಡುತ್ತಿದ್ದರಿಂದ ಬೇಸತ್ತಿದ್ದ ರಾಜೇಂದ್ರ ಏಪ್ರಿಲ್ 20ರಂದು ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ವಿದ್ಯಮಾನ‌ ನಗರದಲ್ಲಿ ಬಾಡಿಗೆ ಕೇಳು ನೆಪದಲ್ಲಿ ಒಂಟಿ ವೃದ್ಧೆಗೆ ಹಲ್ಲೆ ನಡೆಸಿದ್ದ. ಬಳಿಕ ಸ್ಪಾನರ್‌ನಿಂದ ಆಕೆಯ ತಲೆಗೆ ಹೊಡೆದು 48ಗ್ರಾಂ ಚಿನ್ನದ ಸರ ದರೋಡೆ ಮಾಡಿ ಪರಾರಿಯಾಗಿದ್ದ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಠಾಣಾ ಪೊಲೀಸರು ಆರೋಪಿ ರಾಜೇಂದ್ರನ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಈ ನಡುವೆ ರಾಜೇಂದ್ರ ಭದ್ರಾವತಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕ್ರೌರ್ಯ! ಮರದ ರೆಂಬೆಗೆ ತಲೆಕೆಳಗಾಗಿ ನೇತುಹಾಕಿ ಯುವಕನಿಗೆ ಥಳಿತ- ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.