ETV Bharat / city

ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

author img

By

Published : Jan 23, 2022, 12:56 PM IST

ಪ್ರಕರದಲ್ಲಿ ಭಾಗಿಯಾಗಿ ಹಲವು ತಿಂಗಳಿಂದ ಎಸ್ಕೇಪ್ ಆಗಿದ್ದ ಆರೋಪಿಗಳು ಸುಂಕದಕಟ್ಟೆ ಬಳಿ ಅಡಗಿಕೊಂಡಿರುವ ಬಗ್ಗೆ ಅರಿತ ಸಿಸಿಬಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ‌..

two arrested under producer umapati murder attempt case
ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣದ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು : ನಿರ್ಮಾಪಕ ಉಮಾಪತಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ 16 ಹಾಗೂ 17ನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ದರ್ಶನ್ ಹಾಗೂ ಸಂಜು ಎಂಬಾತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಜಯನಗರ ಪೊಲೀಸರಿಗೆ ಒಪ್ಪಿಸಲಾಗಿದೆ.

2020ರ ಡಿಸೆಂಬರ್​ನಲ್ಲಿ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಪಕ ಉಮಾಪತಿ, ಸಹೋದರ ದೀಪಕ್, ರೌಡಿಶೀಟರ್ ಸೈಕಲ್ ರವಿ ಹತ್ಯೆಗೆ ಸಂಚು ರೂಪಿಸಿ ಮಾರಕಾಸ್ತ್ರ ಹಿಡಿದು 15ಕ್ಕಿಂತ ಹೆಚ್ಚು ಮಂದಿ ಪ್ಲ್ಯಾನ್ ಮಾಡಿಕೊಂಡಿದ್ದರು.

ಇದನ್ನೂ ಓದಿ: ಧಾರವಾಡ : ಮಾನ್ಯತೆ ರದ್ದಾಗುವ ಭೀತಿಯಲ್ಲಿ ಅನುದಾನಿತ ಶಾಲೆಗಳು

ಈ ಮಾಹಿತಿ ಅರಿತಿದ್ದ ಅಂದಿನ ಜಯನಗರ ಪೊಲೀಸ್ ಠಾಣೆಯ ಇನ್​​ಸ್ಪೆಕ್ಟರ್ ಹರೀಶ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ 10ಕ್ಕಿಂತ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿತ್ತು.

ಪ್ರಕರದಲ್ಲಿ ಭಾಗಿಯಾಗಿ ಹಲವು ತಿಂಗಳಿಂದ ಎಸ್ಕೇಪ್ ಆಗಿದ್ದ ಆರೋಪಿಗಳು ಸುಂಕದಕಟ್ಟೆ ಬಳಿ ಅಡಗಿಕೊಂಡಿರುವ ಬಗ್ಗೆ ಅರಿತ ಸಿಸಿಬಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ‌.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.