ETV Bharat / city

ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವ-ಡಿಕೆಶಿ ಭೇಟಿ.. ಕೆಪಿಸಿಸಿ ಅಧ್ಯಕ್ಷರಿಗೆ ವಿವಿಧ ನಾಯಕರಿಂದ ಅಭಿನಂದನೆ

author img

By

Published : Jun 3, 2020, 10:48 PM IST

ಇತ್ತೀಚೆಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆಶಿ ಯಾವುದೇ ನಾಯಕರನ್ನು ಭೇಟಿಯಾಗಿರಲಿಲ್ಲ. ಅಲ್ಲದೆ ಶೀಘ್ರವೇ ಕೆಪಿಸಿಸಿ ಅಧ್ಯಕ್ಷಗಾದಿ ಅಧಿಕೃತವಾಗಿ ವಹಿಸಿಕೊಳ್ಳಲಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಮುಖಂಡರು ಆಗಮಿಸಿ ಅಭಿನಂದಿಸುತ್ತಿದ್ದಾರೆ.

Various leaders  met and congratulated DK Shivakumar
ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಅಭಿನಂದಿಸಿದ ವಿವಿಧ ನಾಯಕರು

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಪಕ್ಷದ ವಿವಿಧ ಮುಖಂಡರು ಅವರನ್ನ ಅಭಿನಂದಿಸಿದ್ದಾರೆ.

ಡಿ ಕೆ ಶಿವಕುಮಾರ್ ಭೇಟಿ ಮಾಡಿ ಅಭಿನಂದಿಸಿದ ವಿವಿಧ ನಾಯಕರು..

ಇತ್ತೀಚೆಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆಶಿ ಯಾವುದೇ ನಾಯಕರನ್ನು ಭೇಟಿಯಾಗಿರಲಿಲ್ಲ. ಅಲ್ಲದೆ ಶೀಘ್ರವೇ ಕೆಪಿಸಿಸಿ ಅಧ್ಯಕ್ಷಗಾದಿ ಅಧಿಕೃತವಾಗಿ ವಹಿಸಿಕೊಳ್ಳಲಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಮುಖಂಡರು ಆಗಮಿಸಿ ಅಭಿನಂದಿಸುತ್ತಿದ್ದಾರೆ. ಮೈಸೂರಿನ ಜಯಚಾಮರಾಜೇಂದ್ರ ಒಡೆಯರ್ ಗರಡಿ ಸಂಘ ಹಾಗೂ ಸಾಹುಕಾರ್ ಚೆನ್ನಯ ಕುಸ್ತಿ ಅಖಾಡದ ಅಧ್ಯಕ್ಷರಾದ ಕೆ ಚಂದ್ರಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್ ಮಹದೇವ್ ಅವರು ಡಿಕೆಶಿಯವರನ್ನ ಸನ್ಮಾನಿಸಿದರು.

ಮಾರ್ಗರೇಟ್ ಆಳ್ವ ಭೇಟಿ : ಇಂದು ಸಂಜೆ ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವ ಅವರು, ಡಿಕೆಶಿಯನ್ನ ಭೇಟಿ ಮಾಡಿ ಅಭಿನಂದಿಸಿದರು. ಈ ವೇಳೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.