ETV Bharat / city

ಖಾಸಗಿ ಬಸ್​ಗಳ ಮಧ್ಯೆ ಅಪಘಾತ : 15 ಪ್ರಯಾಣಿಕರಿಗೆ ಗಂಭೀರ ಗಾಯ

author img

By

Published : Dec 24, 2021, 1:11 PM IST

Updated : Dec 24, 2021, 1:28 PM IST

ಅಪಘಾತದ ರಭಸಕ್ಕೆ ಬಸ್​ಗಳು ನಜ್ಜುಗುಜ್ಜಾಗಿವೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಅತಿ ವೇಗವಾಗಿ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ..

bus-accident-in-davanagere
ಬಸ್​ಗಳ ಮಧ್ಯ ಅಪಘಾತ

ದಾವಣಗೆರೆ : ಎರಡು ಖಾಸಗಿ ಬಸ್​ಗಳ ನಡುವೆ ಅಪಘಾತ ಸಂಭವಿಸಿ 15 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹೊರ ವಲಯದಲ್ಲಿ ನಡೆದಿದೆ. ಅದೃಷ್ಟವಶಾತ್‌ ಭಾರೀ‌ ಅನಾಹುತ ತಪ್ಪಿದಂತಾಗಿದೆ.

ಶಿವಮೊಗ್ಗದಿಂದ ದಾವಣಗೆರೆಗೆ ಬರುತ್ತಿದ್ದ ಖಾಸಗಿ ಬಸ್​​ ಹಾಗೂ ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್​ಗಳ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್​ಗಳು ನಜ್ಜುಗುಜ್ಜಾಗಿವೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಅತಿ ವೇಗವಾಗಿ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಈ ಬಸ್ ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಳುಗಳನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನೂ ಕೆಲ ಗಾಯಳುಗಳನ್ನು ಹೊನ್ನಾಳಿ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನ್ಯಾಮತಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Last Updated : Dec 24, 2021, 1:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.