ETV Bharat / city

ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ : ಅರುಣ್​ ಸಿಂಗ್

author img

By

Published : Dec 29, 2021, 12:07 PM IST

arun singh outrage on congress
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್

ಪ್ರಧಾನಿ ನೇತೃತ್ವದಲ್ಲಿ ಅವರ ಸಾಧನೆ ಸೇರಿದಂತೆ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆ. 150ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೆ ನಾವೆಲ್ಲ ಸನ್ನದ್ಧರಾಗಿದ್ದೇವೆ..

ಹುಬ್ಬಳ್ಳಿ (ಧಾರವಾಡ): ಈ ಹಿಂದೆ ಸಿದ್ದರಾಮಯ್ಯ ಸರ್ಕಾರವಿದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ, ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಹೇಳಿದರು.

ಹುಬ್ಬಳ್ಳಿಯಲ್ಲಿ ಅರುಣ್​ ಸಿಂಗ್ ಮಾತನಾಡಿರುವುದು..

ನಗರದಲ್ಲಿಂದು ಕಾರ್ಯಕಾರಣಿ ಬಳಿಕ‌ ಮಾತನಾಡಿದ ಅವರು, ಕಾಂಗ್ರೆಸ್​ ಪಕ್ಷದಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಕಾಂಗ್ರೆಸ್ ಮಾಡುತ್ತಿದೆ. ನಾವು ಎರಡು ದಿನಗಳ ಕಾಲ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ ಎಂದರು.

ಇದನ್ನೂ ಓದಿ: ಕಾರ್ಯಕಾರಿಣಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ

ಪ್ರಧಾನಿ ನೇತೃತ್ವದಲ್ಲಿ ಅವರ ಸಾಧನೆ ಸೇರಿದಂತೆ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆ. 150ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೆ ನಾವೆಲ್ಲ ಸನ್ನದ್ಧರಾಗಿದ್ದೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.