ETV Bharat / city

ಯೋಗೇಶ್​ಗೌಡ ಹತ್ಯೆ ಪ್ರಕರಣ : ಸಿಬಿಐ ವಿಚಾರಣೆಗೆ ಹಾಜರಾದ ಬಸವರಾಜ ಮುತ್ತಗಿ

author img

By

Published : Jan 21, 2021, 5:37 PM IST

basavaraja-muthangi-attended-cbi-hearing
ಬಸವರಾಜ ಮುತ್ತಗಿ

ಉಪನಗರ ಪೊಲೀಸ್ ಠಾಣೆಗೆ ಆಗಮಿಸಿದ ಸಿಬಿಐ ತನಿಖಾಧಿಕಾರಿ ರಾಕೇಶ ರಂಜನ್ ನೇತೃತ್ವದ ತಂಡ, ಪ್ರಮುಖ ಆರೋಪಿ‌ ಬಸವರಾಜ ಮುತ್ತಗಿಗೆ ಬುಲಾವ್ ನೀಡಿದ್ದು, ಮುತ್ತಗಿ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಸಿಬಿಐ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಸ್ಥಳೀಯ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿದ ಸಿಬಿಐ ತನಿಖಾಧಿಕಾರಿ ರಾಕೇಶ ರಂಜನ್ ನೇತೃತ್ವದ ತಂಡ, ಪ್ರಮುಖ ಆರೋಪಿ‌ ಬಸವರಾಜ ಮುತ್ತಗಿಗೆ ಬುಲಾವ್ ನೀಡಿದ್ದು, ಮುತ್ತಗಿ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

ಓದಿ-ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಇಲ್ಲ: ಬಿಎಸ್​​​ವೈ ಸ್ಪಷ್ಟನೆ

ಹೈಕೋರ್ಟ್​ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮತ್ತೆ ಸಿಬಿಐ ವಿಚಾರಣೆ ನಡೆಸುತ್ತಿದೆ. ಇನ್ನಷ್ಟು ಜನರನ್ನು ಕರೆಸಿ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.