ETV Bharat / city

ಸ್ವಚ್ಛತಾ ಕಾರ್ಯದಲ್ಲಿದ್ದ ಪೌರ ಕಾರ್ಮಿಕ ಎದೆನೋವಿನಿಂದ ಸಾವು..

author img

By

Published : Apr 12, 2020, 5:37 PM IST

civilian labor death
ಪೌರ ಕಾರ್ಮಿಕ ಸಾವು

ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದ ವೇಳೆಯೇ ಎದೆನೋವು ಕಾಣಿಸಿಕೊಂಡು ಪೌರ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿ : ಕರ್ತವ್ಯದಲ್ಲಿದ್ದ ಪೌರ ಕಾರ್ಮಿಕನೊಬ್ಬ ಎದೆನೋವು ಕಾಣಿಸಿಕೊಂಡು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಅಶೋಕ್​ ಎಂಬಾತ ಎದೆನೋವಿನಿಂದ ಮೃತಪಟ್ಟ ದುರ್ದೈವಿ.

ಈತ ಮೂಲತಃ ರೋಣ ನಿವಾಸಿ. ಇಂದು ಹುಬ್ಬಳ್ಳಿಯ ವಾರ್ಡ್ ನಂಬರ್ 28ರಲ್ಲಿ ಸ್ವಚ್ಛತಾ ಕಾರ್ಯದಲ್ಲಿ ನಿರತನಾಗಿದ್ದಾಗ ಏಕಾಏಕಿ ಎದೆ ನೋವು ಕಾಣಿಸಿತ್ತು. ತಕ್ಷಣವೇ ಕಿಮ್ಸ್‌ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಶೋಕ್​ ಮೃತಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.