ETV Bharat / city

ಪ್ರತಿಪಕ್ಷಗಳಿಗೆ ಕ್ಷಮೆ ಕೇಳುವ ಸೌಜನ್ಯವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

author img

By

Published : Dec 10, 2021, 9:47 AM IST

ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ವಿರೋಧ ಪಕ್ಷ ಕೇವಲ ವಿರೋಧ ಮಾಡುವುದೇ ಕಾಯಕ‌ ಅಂತ ತಿಳಿದುಕೊಂಡಿವೆ.‌ ಈ ವಿರೋಧ ‌ಪಕ್ಷದಿಂದ ಏನೂ ನಿರೀಕ್ಷಿಸಲು ಸಾಧ್ಯವಿಲ್ಲ. ಅವರಿಗೆ ಕ್ಷಮೆ ಕೇಳುವ ಸೌಜನ್ಯ ಕೂಡ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿ: ಸಂಸತ್​ನಲ್ಲಿ ಗದ್ದಲ ಎಬ್ಬಿಸುತ್ತಿರುವ ಕಾಂಗ್ರೆಸ್ ಸೇರಿದಂತೆ ‌ಪ್ರತಿಪಕ್ಷಗಳಿಗೆ ಕ್ಷಮೆ ಕೇಳುವ ಸೌಜನ್ಯ ಕೂಡ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ವಾಗ್ದಾಳಿ ನಡೆಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷ ಕೇವಲ ವಿರೋಧ ಮಾಡುವುದೇ ಕಾಯಕ‌ ಅಂತ ತಿಳಿದುಕೊಂಡಿವೆ.‌ ಹೀಗಾಗಿ ಅವರಿಂದ ಏನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.


ಹೆಲಿಕಾಪ್ಟರ್ ದುರಂತದಲ್ಲಿ ಒಬ್ಬ ಅಪ್ರತಿಮ ಯೋಧನನ್ನು ದೇಶ ಕಳೆದುಕೊಂಡಿದೆ. ಬಿಪಿನ್ ರಾವತ್ ಘಟನೆ ಅತ್ಯಂತ ದುರಾದೃಷ್ಟಕರ. ಈ ಕುರಿತು ತನಿಖೆ ಮಾಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.