ETV Bharat / city

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕಂದಾಯ ಸಚಿವ ಆರ್.ಅಶೋಕ್

author img

By

Published : Dec 29, 2021, 2:31 AM IST

minister r.ashok on leadership change in hubballi
ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕಂದಾಯ ಸಚಿವ ಆರ್.ಅಶೋಕ್

ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಜನಪರ ಕೆಲಸವನ್ನು ಜನರಿಗೆ ಮುಟ್ಟಿಸುವ ಕುರಿತು ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಸ್ಪಷ್ಟನೆ ನೀಡಿದ್ದಾರೆ.

ಹುಬ್ಬಳ್ಳಿ : ಸಿಎಂ ಬದಲಾವಣೆ ಪ್ರಶ್ನೆ ಪದೇ ಪದೇ ಉದ್ಭವಾಗುವುದಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವುದೆಲ್ಲಾ ಸತ್ಯವಲ್ಲ ಎಂದು ಸಚಿವ ಆರ್​.ಅಶೋಕ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಪಕ್ಷ ಕಟ್ಟುವ ನಿಟ್ಟಿನಲ್ಲಿ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆದಿದೆ ಎಂದರು.

ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಸರ್ಕಾರ ವಿಶೇಷ ಯೋಜನೆಗಳನ್ನು ಮಾಡಿದೆ . ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಜನಪರ ಕೆಲಸವನ್ನು ಜನರಿಗೆ ಮುಟ್ಟಿಸುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರ್​.ಅಶೋಕ್ ಹೇಳಿದ್ದಾರೆ.

ಕಂದಾಯ ಸಚಿವ ಆರ್.ಅಶೋಕ್

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಆ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚೆಯೂ ಆಗಿಲ್ಲ ಎಂದು ಆರ್​.ಅಶೋಕ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಿ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.