ETV Bharat / city

ಪ್ರಾರ್ಥನೆ ಬಳಿಕ ಶ್ರೀಗಳ ಆಶೀರ್ವಾದ ಪಡೆದ ಮುಸ್ಲಿಮರು.. ಸೌಹಾರ್ದತೆಗೆ ಸಾಕ್ಷಿಯಾದ ಮೂರುಸಾವಿರ ಮಠ

author img

By

Published : May 3, 2022, 8:38 PM IST

ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಸ್ಲಿಮರು ಹುಬ್ಬಳ್ಳಿಯ ಮೂರು ಸಾವಿರ ಮಠಕ್ಕೆ ಬಂದು ಶ್ರೀಗಳ ಆಶೀರ್ವಾದ ಪಡೆದರು.

ramzan-celebrate
ಹುಬ್ಬಳ್ಳಿ

ಹುಬ್ಬಳ್ಳಿ: ನಗರದ ಮೂರುಸಾವಿರ ಮಠಕ್ಕೂ ರಂಜಾನ್ ಹಬ್ಬಕ್ಕೂ ಅವಿನಾಭಾವ ಸಂಬಂಧವಿದೆ. ಕಳೆದ 2 ವರ್ಷಗಳಿಂದ ಕೋವಿಡ್​ನಿಂದ ರಂಜಾನ್ ಸಾಮೂಹಿಕ ಪ್ರಾರ್ಥನೆ ರದ್ದು ಮಾಡಲಾಗಿತ್ತು. ಆದರೆ ಈ ವರ್ಷ ಮುಸ್ಲಿಂ ಮುಖಂಡರು ಸಾಮೂಹಿಕ ಪ್ರಾರ್ಥನೆ ನಂತರ ಮೂರು ಸಾವಿರ ಮಠಕ್ಕೆ ಭೇಟಿ ನೀಡಿ ಗುರುಸಿದ್ದರಾಜಯೋಗಿಂದ್ರ ಶ್ರೀಗಳ ಆಶೀರ್ವಾದ ಪಡೆದು, ಪರಸ್ಪರ ಶುಭಾಶಯ ಹಂಚಿಕೊಂಡರು.

ಸೌಹಾರ್ದತೆಗೆ ಸಾಕ್ಷಿಯಾದ ಮೂರುಸಾವಿರ ಮಠ

ಇದೊಂದು ಭಾವೈಕ್ಯತೆಯ ಪ್ರತೀಕವಾಗಿದ್ದು, ಪ್ರತಿ ವರ್ಷ ಇದನ್ನು ನಡೆಸಿಕೊಂಡು ಬರಲಾಗುತ್ತಿದೆ.‌ ಈ ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡಿ, ಬಸವ ಜಯಂತಿ ಮತ್ತು ರಂಜಾನ್​ ಹಬ್ಬ ಒಂದೇ ದಿನ ಆಚರಿಸಲ್ಪಡುತ್ತಿದ್ದು, ಆ ದೇವರೇ ಭಾವೈಕ್ಯತೆಯಿಂದ ಇರುವಂತೆ ಈ ಹಬ್ಬಗಳು ಒಟ್ಟಿಗೆ ಬರುವಂತೆ ಮಾಡಿದ್ದಾನೆ. ಹೀಗಾಗಿ ಎಲ್ಲರೂ ಶಾಂತಿಯಿಂದ ಸಂತೋಷದಿಂದ ಹಬ್ಬವನ್ನು ಆಚರಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಸದಾನಂದ ಡಂಗನವರ, ರಜತ ಉಳ್ಳಾಗಡ್ಡಿ ಮಠ, ಮತ್ತು ಅನೇಕ ಹಿಂದೂ-ಮಸ್ಲಿಮ ಮುಖಂಡರು ಉಪಸ್ಥಿತರಿದ್ದರು.

ಓದಿ: ಕುಶಲೋಪರಿಗೆ ಸೀಮಿತವಾದ ಸಿಎಂ ಲಂಚ್ ಮೀಟ್: ಅಮಿತ್ ಶಾ ಬಂದರೂ ಗೊಂದಲಕ್ಕೆ ಬೀಳದ ತೆರೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.