ETV Bharat / city

ಕಾರು - ಬಸ್​​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

author img

By

Published : Apr 6, 2022, 10:27 AM IST

road Accident at Hubli
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ

ಕಾರು - ಸಾರಿಗೆ ಸಂಸ್ಥೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಸಾವನಪ್ಪಿದ್ದಾರೆ. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ಈ ಘಟನೆ ನಡೆದಿದೆ.

ಹುಬ್ಬಳ್ಳಿ: ಹೈದರಾಬಾದ್​​ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಐರಾವತ್ ಬಸ್​ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ಈ ದುರ್ಘಟನೆ ನಡೆದಿದೆ.

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ..

ಶಿರಗುಪ್ಪಿ ಬಳಿಯ ರಸ್ತೆಯ ಮೊದಲ ತಿರುವಿನಲ್ಲಿಯೇ ರಾಂಗ್ ರೂಟಿಗೆ ಐರಾವತ್​ ಬಸ್​​ ಬಂದಿದ್ದರಿಂದ ಎದುರಿಗೆ ಬಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಸ್​​​​ನ ವೇಗ ಹೆಚ್ಚಾಗಿದ್ದರಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಮೃತರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಘಟನೆಗೆ ಐರಾವತ್ ಬಸ್​​ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನ ಸ್ಥಳೀಯರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: ಗುಂಡ್ಲುಪೇಟೆ ಬಳಿ ಹೈದರಾಬಾದ್ ಪ್ರವಾಸಿಗರ ಕಾರು ಡಿಕ್ಕಿ; ಮಹಿಳೆ ಸಾವು, ಹಲವರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.