ETV Bharat / city

ಮುಂದುವರೆದ ಎಂಇಎಸ್-ಶಿವಸೇನೆ ಉದ್ಧಟತನ : ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸ್ಥಗಿತ

author img

By

Published : Dec 22, 2021, 12:25 PM IST

ಪ್ರತಿ ದಿನ ಕಲ್ಯಾಣ ಕರ್ನಾಟಕ ಭಾಗದಿಂದ ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಸರಿ ಸುಮಾರು 351 ಬಸ್​ಗಳು ಸಂಚಾರ ಮಾಡುತ್ತವೆ. ಇದೀಗ ಬಸ್​ ಸಂಚಾರ ಸ್ಥಗಿತಗೊಂಡ ಹಿನ್ನೆಲೆ ನಿತ್ಯವು ಸುಮಾರು 40 ಲಕ್ಷ ರೂಪಾಯಿ ನಷ್ಟ ಸಂಭವಿಸುತ್ತಿದೆ. ಎಂಇಎಸ್ ಪುಂಡರು ಸಾರಿಗೆ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿ ಮಸಿ ಬಳಿದಿದ್ದಾರೆ..

Karnataka to maharashtra bus service stopped
ಮಹಾರಾಷ್ಟ್ರಕ್ಕೆ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತ

ಕಲಬುರಗಿ : ಮಹಾರಾಷ್ಟ್ರದಲ್ಲಿ‌ ಎಂಇಎಸ್ ಕಾರ್ಯಕರ್ತರ ಉದ್ಧಟತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಸಾರಿಗೆ ಸಂಸ್ಥೆಯ ಬಸ್​ಗಳನ್ನು ಟಾರ್ಗೆಟ್ ಮಾಡಿರುವ ಕಿಡಿಗೇಡಿಗಳು ಕಪ್ಪು ಮಸಿ ಬಳಿದು, ಸಂಚಾರಕ್ಕೆ ತಡೆ ಮಾಡುತ್ತಿದ್ದಾರೆ. ಹೀಗಾಗಿ, ಕಲ್ಯಾಣ‌ ಕರ್ನಾಟಕ ಸಾರಿಗೆ ಸಂಸ್ಥೆ ಇದೀಗ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಬಂದ್​ ಮಾಡಿದೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​ಗಳಿಗೆ ಎಂಇಎಸ್ ಕಾರ್ಯಕರ್ತರು ಹಾನಿ ಮಾಡುತ್ತಿರುವ ಹಿನ್ನೆಲೆ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಮಹಾರಾಷ್ಟ್ರಕ್ಕೆ ಹೊರಡುತ್ತಿದ್ದ ಎಲ್ಲಾ ಬಸ್​ ಸಂಚಾರ ಬಂದ್​ ಮಾಡಲಾಗಿದೆ.

ಮಹಾರಾಷ್ಟ್ರಕ್ಕೆ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟು ಹಾಕಿದ ಪ್ರಕರಣದ ನಂತರ ಎರಡೂ ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿವೆ. ಕಲಬುರಗಿ ಡಿಪೋದ ಬಸ್​ಗಳನ್ನು ನೆರೆಯ ಮಹಾರಾಷ್ಟ್ರ ರಾಜ್ಯದ ಎಂಇಎಸ್​ ಪುಂಡರು ನಿಲ್ಲಿಸಿ ಬಸ್​ಗೆ ಮಸಿ ಬಳಿದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ.

ಓದಿ: ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು: ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಪ್ರತಿ ದಿನ ಕಲ್ಯಾಣ ಕರ್ನಾಟಕ ಭಾಗದಿಂದ ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಸರಿ ಸುಮಾರು 351 ಬಸ್​ಗಳು ಸಂಚಾರ ಮಾಡುತ್ತವೆ. ಇದೀಗ ಬಸ್​ ಸಂಚಾರ ಸ್ಥಗಿತಗೊಂಡ ಹಿನ್ನೆಲೆ ನಿತ್ಯವು ಸುಮಾರು 40 ಲಕ್ಷ ರೂಪಾಯಿ ನಷ್ಟ ಸಂಭವಿಸುತ್ತಿದೆ. ಎಂಇಎಸ್ ಪುಂಡರು ಸಾರಿಗೆ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿ ಮಸಿ ಬಳಿದಿದ್ದಾರೆ.

ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಬಸ್​ಗಳು ತೆರಳುತ್ತಿಲ್ಲ. ಈ ಮಧ್ಯೆ ಕರ್ನಾಟಕದಿಂದ ಮಹಾರಾಷ್ಟ್ರದ ಪುಣೆ, ಸೋಲಾಪುರ‌ಕ್ಕೆ ಹೋಗುವ ಬಸ್​ಗಳನ್ನು ತಡೆದ ಕಿಡಿಗೇಡಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಮಸಿ ಬಳಿದಿದ್ದಾರೆ‌.

ಜೊತೆಗೆ ಕಾರುಗಳ ಮೇಲೂ ಕಲ್ಲು ತೂರಾಟ ನಡೆಸಿ, ಕಾರನ್ನು ಜಖಂಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷ್​ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.