ETV Bharat / city

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕಾನೂನು ತೊಡಕು: ಜನಪ್ರತಿನಿಧಿಗಳ ಸಭೆ ಕರೆಯಲು ಸಿಎಂಗೆ ಮನವಿ

author img

By

Published : May 25, 2020, 5:07 PM IST

ಕೆಕೆಆರ್​​ಡಿಬಿಯಡಿಯಲ್ಲಿ ಇರುವ ಕಾನೂನು ತೊಡಕುಗಳನ್ನು ನಿವಾರಿಸಲು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಸಭೆ ಕರೆದು, ಕಲ್ಯಾಣ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮನವಿ ಮಾಡಿದರು.

Legislative Rajkumar Patil Teelkura
ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ

ಸೇಡಂ: ಕೆಕೆಆರ್​​ಡಿಬಿಗೆ (ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ) ವಿಧಿಸಿರುವ ಷರತ್ತುಗಳಿಂದ ಈ ಭಾಗದ ಅಭಿವೃದ್ಧಿಗೆ ಕಾನೂನು ತೊಡಕುಂಟಾಗುತ್ತಿದೆ ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅಸಮಾಧಾನ ಹೊರ ಹಾಕಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಕೆಆರ್​​ಡಿಬಿಯಲ್ಲಿ ಅನೇಕ ಬದಲಾವಣೆ ತಂದ ಪರಿಣಾಮ ಅಭಿವೃದ್ಧಿ ಕಾರ್ಯಗಳಿಗೆ ಕೊಡಲಿ ಪೆಟ್ಟು ಬಿದ್ದಂತಾಗಿದೆ. ಕೂಡಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪಕ್ಷಾತೀತವಾಗಿ ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಅವರು ಆಗ್ರಹಿಸಿದರು.

ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ

ಈಗಾಗಲೇ ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ. ಕೆಕೆಆರ್​​ಡಿಬಿ ಅನುದಾನದಲ್ಲಿ ಆಗುತ್ತಿರುವ ಕಾನೂನು ತೊಡಕುಗಳ ಬಗ್ಗೆ ತಿಳಿಸಿದ್ದೇನೆ. ಮೈಕ್ರೋ, ಮ್ಯಾಕ್ರೋ, ಸೋಷಿಯಲ್ ಹೀಗೆ ವಿವಿಧ ಯೋಜನೆಗಳ ಹೆಸರಲ್ಲಿ ಅನುದಾನ ವಿಂಗಡಿಸಿ ಹಣದ ಸದ್ಬಳಕೆಗೆ ನೂರಾರು ಷರತ್ತು ವಿಧಿಸಲಾಗಿದೆ ಎಂದರು.

ಅನುದಾನ ಪಡೆಯುವಾಗ ಅಧಿಕಾರಿಗಳು ತಡೆಯುತ್ತಿದ್ದಾರೆ. ಹೀಗಾಗಿ ಮಂಡಳಿಯ ಹಣವನ್ನು ಆಯಾ ವರ್ಷದಲ್ಲಿ ಬಳಕೆ ಮಾಡಲಾಗುತ್ತಿಲ್ಲ. ಖಾಲಿ ಹುದ್ದೆಗಳಿಗೆ ಭರ್ತಿ ಮಾಡುತ್ತಿಲ್ಲ. ಮೀಸಲಾತಿ ದೊರೆಯುತ್ತಿಲ್ಲ. ಅಧಿಕಾರಿಗಳ ಬಡ್ತಿಗೆ ವಿಘ್ನ ಎದುರಾದಂತಾಗಿದೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.