ETV Bharat / city

ಕಲಬುರಗಿಯಲ್ಲಿ ಉಸಿರುಗಟ್ಟಿಸಿ ಬಾಲಕನ ಕೊಲೆ!

author img

By

Published : Oct 6, 2021, 5:15 PM IST

kalaburagi kiran hosamani murder case
ಕಲಬುರಗಿ ಕಿರಣ್ ಹೊಸಮನಿ ಕೊಲೆ ಪ್ರಕರಣ

ನಿನ್ನೆ ಮನೆಯಿಂದ ಹೊರ ಹೋಗಿದ್ದ ನಗರದ ಹೌಸಿಂಗ್ ಬೋರ್ಡ್ ನಿವಾಸಿ ಕಿರಣ್ ಹೊಸಮನಿ ಇಂದು ಶವವಾಗಿ ಪತ್ತೆಯಾಗಿದ್ದಾನೆ.

ಕಲಬುರಗಿ: ಗಾರ್ಡನ್​​​ನಲ್ಲಿ ಉಸಿರುಗಟ್ಟಿಸಿ ಬಾಲಕನೊಬ್ಬನನ್ನು ಕೊಲೆ ಮಾಡಿದ ಘಟನೆ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ತಡರಾತ್ರಿ ನಡೆದಿದೆ.

kalaburagi kiran hosamani murder case
ಉಸಿರುಗಟ್ಟಿಸಿ ಬಾಲಕನ ಕೊಲೆ!

ಹೌಸಿಂಗ್ ಬೋರ್ಡ್ ನಿವಾಸಿ ಕಿರಣ್ ಹೊಸಮನಿ (17) ಕೊಲೆಯಾದವ. ಈತ ಕೂಲಿ ಕೆಲಸ ಮಾಡುತ್ತಿದ್ದ. ನಿನ್ನೆ ಮನೆಯಿಂದ ಹೊರ ಹೋಗಿದ್ದ ಈತ ಇಂದು ಗಾರ್ಡನ್​​​​ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮನೆಯಲ್ಲಿ ಯಾದಗಿರಿ ಜಿಲ್ಲೆಯ ಮೈಲಾಪುರದ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋಗಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿ ಚಿಹ್ನೆಯಡಿ ಯಾರೇ ಸ್ಪರ್ಧಿಸಿದ್ರೂ ಗೆಲುವು ಖಚಿತ: ಸಚಿವ ಅಶ್ವತ್ಥ ನಾರಾಯಣ್

ಸದ್ಯ ಕೊಲೆಗೆ ಕಾರಣ ಹಾಗೂ ಯಾರು ಕೊಲೆ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಈ ಸಂಬಂಧ ಎಮ್​ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.