ETV Bharat / city

ಪಿಎಸ್​ಐ ಪರೀಕ್ಷೆ: ದಿವ್ಯಾ ಹಾಗರಗಿ, ಆರ್​ಡಿ ಪಾಟೀಲ್ ಸೇರಿ ನಾಲ್ವರಿಗೆ ಸಿಗದ ಜಾಮೀನು

author img

By

Published : May 20, 2022, 7:02 PM IST

ಪಿಎಸ್​ಐ ಪರೀಕ್ಷೆ
ಪಿಎಸ್​ಐ ಪರೀಕ್ಷೆ

ಪಿಎಸ್ಐ ಅಕ್ರಮ ಪರೀಕ್ಷಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ಜಾಮೀನು ನೀಡಲು ಕೋರ್ಟ್​ ಮತ್ತೊಮ್ಮೆ ನಿರಾಕರಿಸಿದೆ.

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಆರ್.ಡಿ.ಪಾಟೀಲ್, ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಾಮೀನು ನೀಡಲು‌ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ಇನ್ನಷ್ಟು ದಿನ ಆರೋಪಿಗಳಿಗೆ ಜೈಲೇ ಗತಿಯಾಗಿದೆ. ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಕಲಬುರಗಿ ಜಿಲ್ಲಾ 3ನೇ ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿದೆ.

ಬ್ಲೂಟೂತ್ ಡಿವೈಸ್ ಮೂಲಕ ಪಿಎಸ್​ಐ ಅಭ್ಯರ್ಥಿಗಳು ತೇರ್ಗಡೆ ಆಗಲು ಸಹಕರಿಸುತ್ತಿದ್ದ ಆರೋಪಿ ಆರ್.ಡಿ.ಪಾಟೀಲ್, ಎನ್.ವಿ. ಸುನೀಲ್, ತಮ್ಮ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪರೀಕ್ಷೆ ನಡೆಸಲು ಸಹಕರಿಸಿದ ಜ್ಞಾನಜ್ಯೋತಿ ಶಾಲೆಯ ಕಾರ್ಯದರ್ಶಿ ದಿವ್ಯಾ ಹಾಗರಗಿ ಮತ್ತು ಇದೆ ಶಾಲೆಯ ಹೆಡ್​ಮಾಸ್ಟರ್ ಕಾಶಿನಾಥ ಅವರ ಜಾಮೀನು ಅರ್ಜಿಯನ್ನ ನ್ಯಾಯಾಧೀಶ ಬಸವರಾಜ ನೇಸರಗಿ ಅವರ ನೇತೃತ್ವದ ಪೀಠ ತಿರಸ್ಕರಿಸಿದೆ.

ಈ ಹಿಂದೆಯೂ ಆರೋಪಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಆರೋಪಿಗಳಿಗೆ ಜಾಮೀನು ನೀಡದಂತೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ. ಪಿಎಸ್​ಐ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ತೀವ್ರಗೊಳಿಸಿದೆ. ಕಲಬುರಗಿ ಅಷ್ಟೇ ಅಲ್ಲದೇ ಬೆಂಗಳೂರಲ್ಲಿ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಅಂತೆಯೇ ಪಿಎಸ್​ಐ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸುವುದಾಗಿ ಸರ್ಕಾರ ಆದೇಶಿಸಿದೆ. ಈಗಾಗಲೇ ತೇರ್ಗಡೆಯಾದ ಅಭ್ಯರ್ಥಿಗಳು ಮರು ಪರೀಕ್ಷೆಯನ್ನು ವಿರೋಧಿಸಿ, ಕೋರ್ಟ್ ಮೆಟ್ಟಿಲೇರಿದ್ದಾರೆ.

(ಓದಿ: PSI ನೇಮಕಾತಿ ಹಗರಣ: ಡ್ಯಾಂಗೆ ಮೊಬೈಲ್ ಎಸೆದ ಕಿಂಗ್​ಪಿನ್.. ಹುಡುಕಾಟಕ್ಕೆ ನೀರಿಗಿಳಿದ ಸಿಐಡಿ!)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.