ಯುವಕನ ಬರ್ಬರ ಹತ್ಯೆ ಪ್ರಕರಣ: ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು

author img

By

Published : Jan 6, 2022, 10:32 AM IST

two murder case accused arrest

ಕಳೆದ ವರ್ಷ ಡಿಸೆಂಬರ್ 31 ರ ಮಧ್ಯರಾತ್ರಿ ಕುಡಿದ ಅಮಲಿನಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಗಳನ್ನು ಕಲಬುರಗಿಯ ಚೌಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ: ನಗರದ ತಾಜ್ ಬಡಾವಣೆಯ ಮುಸ್ಲಿಂ ಸಂಘದ ಪಕ್ಕದ ಚನ್ನವೀರ ನಗರ ಬಡಾವಣೆಯಲ್ಲಿ ಗೌಸ್ ಜಮಾದರ್ ಎಂಬುವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚೌಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಭವಾನಿ ನಗರ ಬಡಾವಣೆ ನಿವಾಸಿ ಜಗದೀಶ್ ಬಿರಾದರ್, ಅನಿಲ್‌ಕುಮಾರ್ ಬಂಧಿತರು. ಕಳೆದ ವರ್ಷ ಡಿಸೆಂಬರ್ 31 ರ ಮಧ್ಯರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಕುಡಿದ ಅಮಲಿನಲ್ಲಿ ಗೌಸ್ ಜಮಾದರ್ ಮತ್ತು ಆರೋಪಿಗಳ ಮಧ್ಯೆ ಜಗಳ ನಡೆದಿದೆ. ಈ ವೇಳೆ ಖದೀಮರು ಗೌಸ್ ಜಮಾದರ್‌ನನ್ನು ಹೊಡೆದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದರು‌.

ಕೊಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಓದಿ: ಹೆಂಡತಿಗೆ ವಾರಕ್ಕೊಮ್ಮೆ ಹೋಟೆಲ್ ಊಟ ತಿನ್ನುವ ಆಸೆ: ಕೊಡಿಸದ ಗಂಡ, 2 ಮಕ್ಕಳ ಜೊತೆ ಆತ್ಮಹತ್ಯೆಗೆ ಶರಣಾದ ಪತ್ನಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯ ಸಂಗ್ರಹಿಸಿ, ತನಿಖೆ ನಡೆಸಿದ ಪೊಲೀಸರು ಕೊನೆಗೂ ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.