ETV Bharat / city

ಕಲಬುರಗಿಯಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ!

author img

By

Published : Jun 2, 2022, 12:39 PM IST

Young man murder in Kalaburagi, Kalaburagi crime news, Murder in Kalaburagi, ಕಲಬುರಗಿಯಲ್ಲಿ ಯುವಕನ ಹತ್ಯೆ, ಕಲಬುರಗಿ ಅಪರಾಧ ಸುದ್ದಿ, ಕಲಬುರಗಿಯಲ್ಲಿ ಕೊಲೆ,
ಯುವಕನ ಬರ್ಬರ ಹತ್ಯೆ

ಕಲಬುರಗಿ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರೇ ನನ್ನ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಕೊಲೆಗೀಡಾದ ಯುವಕನ ಪೋಷಕರು ಆರೋಪಿಸಿದ್ದಾರೆ.

ಕಲಬುರಗಿ: ತಲೆ ಮೇಲೆ ಕಲ್ಲನ್ನು ಎತ್ತಿಹಾಕಿ ಯುವಕನನ್ನು ಭೀಕರವಾಗಿ ಹತ್ಯೆಮಾಡಿರುವ ಘಟನೆ ಕಮಲಾಪುರ ತಾಲೂಕಿನ ಮಹಾಗಾಂವ್ ಪುನರ ವಸತಿ ಕೇಂದ್ರದಲ್ಲಿ ನಡೆದಿದೆ. ಬಸವನಗರ ನಿವಾಸಿ ಮಂಜುನಾಥ ಕಟ್ಟಿಮನಿ (22) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

Young man murder in Kalaburagi, Kalaburagi crime news, Murder in Kalaburagi, ಕಲಬುರಗಿಯಲ್ಲಿ ಯುವಕನ ಹತ್ಯೆ, ಕಲಬುರಗಿ ಅಪರಾಧ ಸುದ್ದಿ, ಕಲಬುರಗಿಯಲ್ಲಿ ಕೊಲೆ,
ಯುವಕನ ಬರ್ಬರ ಹತ್ಯೆ

ಮಂಜುನಾಥ ನಾಲ್ಕು ದಿನದ ಹಿಂದೆ ಕಾಣೆಯಾಗಿದ್ದನು. ಈ ಕುರಿತು ಕುಟುಂಬಸ್ಥರು ಆರ್.ಜಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮಂಜುನಾಥ ಮಹಾಗಾಂವ್​ನ ಪುನರ ವಸತಿ ಶಾಲೆಯ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿರುವುದು ತಿಳಿದುಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮಂಜುನಾಥ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಓದಿ: ಹಾಸನ ನಗರಸಭೆ ಸದಸ್ಯನ ಬರ್ಬರ ಕೊಲೆ.. ಆಟೋದಲ್ಲಿ ಬಂದು ರಸ್ತೆಯಲ್ಲೇ ಕೊಚ್ಚಿ ಕೊಂದ್ರು!

ಸ್ನೇಹಿತರೇ ನನ್ನ ಮಗ ಮಂಜುನಾಥನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಯುವಕನ ಪೋಷಕರು ಆರೋಪಿಸಿ ದೂರು ನೀಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಂತಕರು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಮಹಾಗಾಂವ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.