ETV Bharat / city

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ-ವಕೀಲ ರಾಜೇಶ್​ಗೆ ಜಾಮೀನು

author img

By

Published : Feb 9, 2022, 3:10 PM IST

Bail for advocate Rajesh
ವಕೀಲ ರಾಜೇಶ್​ಗೆ ಜಾಮೀನು

ಹೈಕೋರ್ಟ್ ನಿನ್ನೆ ಜಾಮೀನು ಮಂಜೂರು ಮಾಡಿದ್ದು, ಇನ್ನೂ ಒಂದೆರಡು ದಿನಗಳಲ್ಲಿ ರಾಜೇಶ್ ಜಾಮೀನಿನ ಮೇಲೆ ಬಿಡುಗಡೆಗೊಳ್ಳಲಿದ್ದಾರೆ..

ಮಂಗಳೂರು (ದಕ್ಷಿಣಕನ್ನಡ) : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನದಲ್ಲಿರುವ ಖ್ಯಾತ ವಕೀಲ ಕೆ ಎಸ್ ಎನ್ ರಾಜೇಶ್​​​ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ತನ್ನ ಕಚೇರಿಯಲ್ಲಿ ಇಂಟರ್ನ್​​ಶಿಪ್​ಗೆ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪ ಹೊತ್ತು ತಲೆಮರೆಸಿಕೊಂಡಿದ್ದ ವಕೀಲ ಕೆಎಸ್‌ಎನ್ ರಾಜೇಶ್ ಡಿಸೆಂಬರ್ 20ರಂದು ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದರು. ಆ ಬಳಿಕ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು.

ಇದನ್ನೂ ಓದಿ: ದಿಂಬಂ ಘಾಟಿಯಲ್ಲಿ ಫೆ.10ರಿಂದ ರಾತ್ರಿ ಸಂಚಾರ ನಿರ್ಬಂಧ : ಪ್ರತಿಭಟನೆಗೆ ಮುಂದಾದ ಜನತೆ

ನಂತರ ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ನಿನ್ನೆ ಜಾಮೀನು ಮಂಜೂರು ಮಾಡಿದ್ದು, ಇನ್ನೂ ಒಂದೆರಡು ದಿನಗಳಲ್ಲಿ ರಾಜೇಶ್ ಜಾಮೀನಿನ ಮೇಲೆ ಬಿಡುಗಡೆಗೊಳ್ಳಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.