ETV Bharat / city

ಮಂಗಳೂರಿನಲ್ಲಿ ಗೋಡ್ಸೆ, ಸಾವರ್ಕರ್ ಬ್ಯಾನರ್ ತೆರವು

author img

By

Published : Aug 19, 2022, 9:18 AM IST

Godse and Savarkar banner  removed
ಮಂಗಳೂರಿನಲ್ಲಿ ಗೋಡ್ಸೆ, ಸಾವರ್ಕರ್ ಬ್ಯಾನರ್ ತೆರವು

ನಾಥೂರಾಮ್ ಗೋಡ್ಸೆ ಮತ್ತು ಸಾವರ್ಕರ್ ಭಾವಚಿತ್ರ ಇರುವ ಬ್ಯಾನರ್​​ಗಳನ್ನು ಮಂಗಳೂರು ಪೊಲೀಸರು ತೆರವುಗೊಳಿಸಿದ್ದಾರೆ.

ಮಂಗಳೂರು: ನಗರದ ಬೈಕಂಪಾಡಿ ಜಂಕ್ಷನ್ ಹಳೆಯಂಗಡಿ ಪೇಟೆ ಹಾಗೂ ದೇರಳಕಟ್ಟೆಯಲ್ಲಿ ಅಳವಡಿಸಿರುವ ನಾಥೂರಾಮ್ ಗೋಡ್ಸೆ ಮತ್ತು ಸಾವರ್ಕರ್ ಭಾವಚಿತ್ರ ಇರುವ ಬ್ಯಾನರ್​​ನ್ನು ಪೊಲೀಸರು ತೆರವುಗೊಳಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೈಕಂಪಾಡಿ ಜಂಕ್ಷನ್ ಮತ್ತು ಹಳೆಯಂಗಡಿಯಲ್ಲಿ ಶುಭಾಶಯ ಕೋರಿ ಬ್ಯಾನರ್ ಅವಳಡಿಸಿದ್ದರು. ಅದರಲ್ಲಿ ನಾಥೂರಾಮ್ ಗೋಡ್ಸೆ ಫೋಟೋ ಅಳವಡಿಸಲಾಗಿತ್ತು. ಅಲ್ಲದೇ ರಾಜಕೀಯವನ್ನು ಹಿಂದುತ್ವಗೊಳಿಸಿ ಹಿಂದೂಗಳನ್ನು ಸೈನಿಕೀಕರಣಗೊಳಿಸಿ ಎಂಬ ಬರಹವನ್ನು ಬರೆಯಲಾಗಿತ್ತು. ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಯಾಗಿತ್ತು. ತಕ್ಷಣ ಎಚ್ಚೆತ್ತ ಪೊಲೀಸರು ಬ್ಯಾನರ್​​ನ್ನು ತೆರವುಗೊಳಿಸಿದ್ದಾರೆ.

ಇದರ ಜೊತೆಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ‌ ಸದಸ್ಯ ಎ ಆರ್ ಫಝಲ್ ಅಸೈಗೋಳಿ ಎಂಬವರು ದೇರಳಕಟ್ಟೆಯಲ್ಲಿ ಸಾವರ್ಕರ್ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿದ್ದರು.‌ ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್ ಅವರಿಗೆ ಶತ ಶತ ನಮನಗಳು ಎಂದು ಬ್ಯಾನರ್ ಹಾಕಿದ್ದರು. ಈ ಬ್ಯಾನರ್​​ನ್ನು ಕೂಡ ತೆರವುಗೊಳಿಸಲಾಗಿದೆ.

ಇದನ್ನೂ ಓದಿ: ಹಿಂದೂಯೇತರರಿಗೆ ವ್ಯಾಪಾರ ನಿಷೇಧದ ಬ್ಯಾನರ್ ತೆರವು ಮಾಡದ್ದಕ್ಕೆ ಕಾಂಗ್ರೆಸ್​ ಆಕ್ರೋಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.