ಮಂಗಳೂರು-ಬೆಂಗಳೂರು ರಾ.ಹೆ 75ರಲ್ಲಿ ಕೆಎಸ್​​ಆರ್​ಟಿಸಿ ಬಸ್ ಪಲ್ಟಿ, ಹಲವರಿಗೆ ಗಾಯ

author img

By

Published : Sep 23, 2021, 9:25 PM IST

ksrtc bus overturned

ಕೆಎಸ್​​ಆರ್​ಟಿಸಿ ಬಸ್ ಪಲ್ಟಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ನೆಲ್ಯಾಡಿ (ದಕ್ಷಿಣ ಕನ್ನಡ): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್​​ಆರ್​ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಗುರುವಾರ ಸಂಜೆ ನಡೆದಿದೆ.

ಕೆಎಸ್​​ಆರ್​ಟಿಸಿ ಬಸ್ ಪಲ್ಟಿ

ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಕೊಕ್ಕಡ, ಗುಂಡ್ಯ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಉದನೆ-ಎಂಜಿರ ಸಮೀಪದ ಊರ್ನಡ್ಕ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾದರೆ ಚಾಲಕ ಸೇರಿದಂತೆ ಕೆಲವರಿಗೆ ಹೆಚ್ಚಿನ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ನಡುವೆ ಘಟನಾ ಸ್ಥಳದಲ್ಲಿದ್ದ ಕೆಲವರು ರಕ್ಷಣಾ ಕಾರ್ಯ ನಿಮಿತ್ತವಾಗಿ ಬಂದ ಆ್ಯಂಬುಲೆನ್ಸ್‌ವೊಂದರ ಕೀ ಕಿತ್ತುಕೊಂಡು ಚಾಲಕನಿಗೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಆ್ಯಂಬುಲೆನ್ಸ್ ಚಾಲಕ ದೂರು ನೀಡಲು ಧರ್ಮಸ್ಥಳ ಠಾಣೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.