ETV Bharat / city

ಇಂದು ಮಂಗಳೂರಿನಲ್ಲಿ ರಾಷ್ಟ್ರಪತಿ ವಾಸ್ತವ್ಯ: ಪೊಲೀಸ್​​ ಬಿಗಿ ಬಂದೋಬಸ್ತ್​​

author img

By

Published : Oct 7, 2021, 10:41 AM IST

ರಾಷ್ಟ್ರಪತಿ ವಾಸ್ತವ್ಯ ಇರಲಿರುವ ಕದ್ರಿ ಸರ್ಕ್ಯೂಟ್ ಹೌಸ್​​ ಅನ್ನು ಸುಸಜ್ಜಿತಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್​​ ಏರ್ಪಡಿಸಲಾಗಿದೆ.

ಕದ್ರಿ ಸರ್ಕ್ಯೂಟ್ ಹೌಸ್
ಕದ್ರಿ ಸರ್ಕ್ಯೂಟ್ ಹೌಸ್

ಮಂಗಳೂರು: ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಮಂಗಳೂರಿನಲ್ಲಿ ರಾಷ್ಟ್ರಪತಿ ವಾಸ್ತವ್ಯ: ಪೊಲೀಸ್​​ ಬಿಗಿ ಬಂದೋಬಸ್ತ್​​

ಇಂದು ಸಂಜೆ ಮಂಗಳೂರಿಗೆ ಆಗಮಿಸುವ ಅವರು, ನಾಳೆ ಬೆಳಿಗ್ಗೆಯವರೆಗೆ ಮಂಗಳೂರಿನಲ್ಲಿ ವಾಸ್ತವ್ಯ ಇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕದ್ರಿ ಸರ್ಕ್ಯೂಟ್ ಹೌಸ್ ಅ​​ನ್ನು ಸುಸಜ್ಜಿತಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ. ರಾಷ್ಟ್ರಪತಿ ಜೊತೆಗೆ ಬರುವ ಅಧಿಕಾರಿ ಹಾಗು ಸಿಬ್ಬಂದಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಜೆ 6.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ರಾಷ್ಟ್ರಪತಿ, 6.45ಕ್ಕೆ ಸರ್ಕ್ಯೂಟ್ ಹೌಸ್​​ನಲ್ಲಿ ವಾಸ್ತವ್ಯ ಹೂಡಲಿದ್ದರೆ. ರಾತ್ರಿ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲು ನಿರ್ಧರಿಸಲಾಗಿದೆ. ನಾಳೆ ಬೆಳಿಗ್ಗೆ 10.30ಕ್ಕೆ ಸರ್ಕ್ಯೂಟ್ ಹೌಸ್​​ನಿಂದ ಹೊರಟು 10.45ಕ್ಕೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಶೃಂಗೇರಿಗೆ ತೆರಳಲಿದ್ದಾರೆ. ನಾಳೆ ಸಂಜೆ 4.55ಕ್ಕೆ ಮಂಗಳೂರು ವಿಮಾನ ನಿಲ್ದಾಣದಕ್ಕೆ ಬರುವ ಅವರು 8 ಗಂಟೆಗೆ ದೆಹಲಿಗೆ ವಾಪಸ್ಸಾಗಲಿದ್ದಾರೆ.

ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ವಾಸ್ತವ್ಯ ಹೂಡಲಿರುವ ಸರ್ಕ್ಯೂಟ್ ಹೌಸ್, ಸಾಗುವ ದಾರಿಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ರಾಷ್ಟ್ರಪತಿಗಳನ್ನು ಕರೆ ತರುವ ಬಗ್ಗೆ ರಿಹರ್ಸಲ್ ನಡೆಸಲಾಗಿದೆ.

ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ರಾಜಭವನದಲ್ಲಿ ಚಹಾಕೂಟ: ರಾಜ್ಯಪಾಲರು, ಹೈಕೋರ್ಟ್‌ ನ್ಯಾಯಮೂರ್ತಿಗಳು ಭಾಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.