ETV Bharat / city

ಚರಂಡಿ ಅಗೆದು ಕಾಂಕ್ರೀಟ್ ಹಾಕದ ಗುತ್ತಿಗೆದಾರ: ಹೆದ್ದಾರಿಯಲ್ಲೇ ಏಕಾಂಗಿ ಪ್ರತಿಭಟನೆ

author img

By

Published : May 19, 2020, 11:20 PM IST

Sewer dug concrete contractor, highway strike
ಚರಂಡಿ ಅಗೆದು ಕಾಂಕ್ರೀಟ್ ಹಾಕದ ಗುತ್ತಿಗೆದಾರ, ಹೆದ್ದಾರಿಯಲ್ಲೇ ಕುರ್ಚಿ ಹಾಕಿ ಏಕಾಂಗಿ ಪ್ರತಿಭಟನೆ..!

ಹೆದ್ದಾರಿ ಕಾಮಗಾರಿಯ ವೇಳೆ ಮಯ್ಯರಬೈಲು ಎಂಬಲ್ಲಿ ಸ್ಥಳೀಯ ನಿವಾಸಿಯೊಬ್ಬರು ತಮ್ಮ ಮನೆಯ ಮುಂದೆ ತೆಗೆದ ಚರಂಡಿಗೆ ಕಾಂಕ್ರೀಟ್ ಹಾಕಿಲ್ಲ ಎಂದು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.

ಬಂಟ್ವಾಳ: ಬಿ.ಸಿ.ರೋಡ್-ಜಕ್ರಿಬೆಟ್ಟು ಹೆದ್ದಾರಿ ಕಾಮಗಾರಿಯ ವೇಳೆ ಮಯ್ಯರಬೈಲು ಎಂಬಲ್ಲಿ ಸ್ಥಳೀಯ ನಿವಾಸಿಯೊಬ್ಬರು ತಮ್ಮ ಮನೆಯ ಮುಂದೆ ತೆಗೆದ ಚರಂಡಿಗೆ ಕಾಂಕ್ರೀಟ್ ಹಾಕಿಲ್ಲ ಎಂದು ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದರು.

ಮೇ 17 ರ ತಡರಾತ್ರಿ ಸುರಿದ ಮಳೆಗೆ ಮಯ್ಯರಬೈಲು ನಿವಾಸಿ ಉದಯಕುಮಾರ್ ರಾವ್ ಅವರ ಮನೆಯ ಆವರಣಕ್ಕೆ ನೀರು ಹಾಗೂ ಮಣ್ಣು ಕೊಚ್ಚಿಕೊಂಡು ಬಂದಿತ್ತು. ಸಭೆ, ಸಮಾರಂಭಗಳಲ್ಲಿ ಅಲಂಕಾರ ಮಾಡುವ ವೃತ್ತಿ ನಿರ್ವಹಿಸುವ ಅವರ ವಸ್ತುಗಳಿಗೆ ಇದರಿಂದ ಹಾನಿಯಾಗಿತ್ತು. ಚರಂಡಿ ಅಗೆದು ಕಾಂಕ್ರೀಟ್ ಅಳವಡಿಸಬೇಕು ಎಂದು ಒತ್ತಡ ಹಾಕಿದ ಪರಿಣಾಮ ಕಾಮಗಾರಿ ನಿರ್ವಹಿಸುವ ಸಂಸ್ಥೆಯವರು ಕೇವಲ ಚರಂಡಿ ತೆಗೆದು ಹೋಗಿದ್ದರು.

ಉದಯಕುಮಾರ್ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ನಡೆದಿದ್ದು, ಮೋರಿ ಹಾಕದೆ ಮನೆಗೆ ಹೋಗುವುದಿಲ್ಲ ಎಂದು ರಸ್ತೆಯಲ್ಲೇ ಕುರ್ಚಿ ಹಾಕಿ ಕುಳಿತು ಪ್ರತಿಭಟಿಸಿದರು. ಈ ವಿಚಾರ ಪೊಲೀಸರಿಗೆ ತಿಳಿದು ಸ್ಥಳಕ್ಕಾಗಮಿಸಿ ಮೋರಿ ಹಾಕುವಂತೆ ಕಾಮಗಾರಿ ನಡೆಸುವವರಿಗೆ ಸೂಚಿಸಿ, ಬಳಿಕ ಅಳವಡಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.