ಅಪಾರ್ಟ್​ಮೆಂಟ್​ನಿಂದ ಬಿದ್ದು ವಿದ್ಯಾರ್ಥಿ ಸಾವು

author img

By

Published : Aug 6, 2022, 10:43 AM IST

Student dies

ಪುತ್ತೂರು ನಗರದ ಬೊಳುವಾರು ಸಮೀಪದ ಅಪಾರ್ಟ್​ಮೆಂಟ್ ಮಹಡಿಯಿಂದ ಬಿದ್ದ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ.

ಪುತ್ತೂರು/ಮಂಗಳೂರು: ಪುತ್ತೂರಿನ ಬೊಳುವಾರಿನ ಅಪಾರ್ಟ್‌ಮೆಂಟ್ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸುದಾನ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಸುಶಾನ್ ರೈ ಮೃತ ಬಾಲಕ. ಈತ ಬೊಳುವಾರು ಸಪರಿವಾರ ಶ್ರೀ ದುರ್ಗಾಪರಮೇಶ್ವರಿ ಮಲರಾಯ ದೇವಸ್ಥಾನದ ಕಮಿಟಿ ಅಧ್ಯಕ್ಷ ಮನೋಹರ್ ರೈ ಪುತ್ರನಾಗಿದ್ದು, ಸುದಾನ ಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ತೆರಳದೇ, ನೇರವಾಗಿ ವಸತಿ ಸಮುಚ್ಚಯಕ್ಕೆ ತೆರಳಿದ ಬಾಲಕ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಐದನೇ ಮಹಡಿಯಲ್ಲಿ ಸ್ಕೂಲ್ ಬ್ಯಾಗ್ ಇರಿಸಿದ್ದಾನೆ.

ಘಟನೆ ನಡೆದ ತಕ್ಷಣ ಅಲ್ಲಿದ್ದ ಸ್ಥಳೀಯರು ಆತನನ್ನ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದರು. ಅದರಂತೆ ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಮುಳುಗಡೆಯಾದ ಸೇತುವೆ ಮೇಲೆ ಬಸ್ ಚಲಾಯಿಸಿ ದುಸ್ಸಾಹಸ ಮೆರೆದ ಚಾಲಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.