ETV Bharat / city

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದಾತ ಅರೆಸ್ಟ್

author img

By

Published : Aug 17, 2022, 10:32 PM IST

ಇತ್ತೀಚೆಗೆ ಸುರತ್ಕಲ್​ನಲ್ಲಿ ನಡೆದ ಫಾಝಿಲ್​ ಎಂಬ ಯುವಕನ ಹತ್ಯೆಯ ಬಳಿಕ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಬಂಟ್ವಾಳದ ನಿವಾಸಿ ಹರ್ಷಿತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Kn_Mng_04_Fazil_Case_Arest_Photo_7202146
ಆಶ್ರಯ ನೀಡಿದ ಆರೋಪಿ

ಮಂಗಳೂರು: ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮಂಗಳೂರು ನಗರ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಬಂಟ್ವಾಳದ ನಿವಾಸಿ ಹರ್ಷಿತ್(28) ಬಂಧಿತ. ಸುರತ್ಕಲ್​ನಲ್ಲಿ ನಡೆದ ಘಟನೆಯ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಅವರಿಗೆ ಉಳಿದುಕೊಳ್ಳಲು ಈತ ಆಶ್ರಯ ನೀಡಿದ್ದನು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ‌. ಹತ್ಯೆ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿರುವ ಕಾರನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಸುರತ್ಕಲ್ ಫಾಜಿಲ್ ಹತ್ಯೆ ಕೇಸ್: ಹಣದಾಸೆಗೆ ಆರೋಪಿಗಳಿಗೆ ಕಾರು ನೀಡಿದ್ದ ಮಾಲೀಕ ಅರೆಸ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.