ETV Bharat / city

ಉರ್ವ ಚರ್ಚ್​ ಬಳಿ ಯುವಕನಿಗೆ ಚೂರಿ ಇರಿತ: ಇಬ್ಬರ ಆರೋಪಿಗಳ ಬಂಧನ

author img

By

Published : May 25, 2019, 6:01 PM IST

Updated : May 26, 2019, 2:17 PM IST

ಉರ್ವ ಚರ್ಚ್​ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಜಗಳ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕ ಗಾಯಗೊಂಡಿದ್ದಾನೆ.

ಬಂಧಿತ ಆರೋಪಿಗಳು

ಮಂಗಳೂರು: ನಗರದ ಉರ್ವ ಚರ್ಚ್​ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಜಗಳ ನಡೆದಿದ್ದು, ಒಬ್ಬಾತ ಇನ್ನೊಬ್ಬನಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ.

ಸ್ಥಳೀಯ ನಿವಾಸಿ ರಿತೇಶ್ (23) ಚೂರಿ ಇರಿತದಿಂದ ಗಾಯಗೊಂಡ ಯುವಕ. ಆರೋಪಿಗಳಾದ ಆಶೀಶ್, ತ್ರಿಶೂಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ವಿಕ್ಕಿ ಎಂಬಾತ ಪರಾರಿಯಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ರಿತೇಶ್​​ ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಮದ್ಯದ ಅಮಲಿನಲ್ಲಿ ಆರಂಭವಾದ ಜಗಳದಿಂದ ಘಟನೆ ನಡೆದಿದೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಮಂಗಳೂರು: ಮದ್ಯದ ಅಮಲಿನಲ್ಲಿ ಯುವಕರ ನಡುವೆ ನಡೆದ ಜಗಳ ಚೂರಿಯಿಂದ ಇರಿದು ಒಬ್ಬಾತ ಗಾಯಗೊಳ್ಳುವಲ್ಲಿಗೆ ಅಂತ್ಯಗೊಂಡ ಘಟನೆ ನಗರದ ಉರ್ವ ಚರ್ಚ್ ಬಳಿ ನಡೆದಿದೆ.

ಉರ್ವದ ಸ್ಥಳೀಯ ನಿವಾಸಿ ರಿತೇಶ್ (23) ಎಂಬಾತ ಇರಿತದಿಂದ ಗಾಯಗೊಂಡ ಯುವಕ. ಆರೋಪಿಗಳಾದ ಆಶೀಶ್, ತ್ರಿಶೂಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ವಿಕ್ಕಿ ಎಂಬಾತ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

Body:ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ಯದ ಅಮಲಿನಲ್ಲಿ ಆರಂಭವಾದ ಜಗಳದಿಂದ ಘಟನೆ ನಡೆದಿದೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Reporter_Vishwanath PanjimogaruConclusion:
Last Updated : May 26, 2019, 2:17 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.