ETV Bharat / city

ಕುಕ್ಕೆ ಸುಬ್ರಮಣ್ಯದಲ್ಲಿ ಸ್ನಾನಕ್ಕಾಗಿ ನದಿಗೆ ಹಾರಿದ ಖಾಸಗಿ ಕಂಪನಿ ಉದ್ಯೋಗಿ ಕಣ್ಮರೆ..

author img

By

Published : Aug 21, 2022, 9:23 PM IST

ಬೆಂಗಳೂರು ನಿವಾಸಿ ಖಾಸಗಿ ಕಂಪನಿ ಉದ್ಯೋಗಿ ಕುಕ್ಕೆ ಸುಬ್ರಮಣ್ಯ ಕ್ಷೇತ್ರ ಸ್ನಾನ ಘಟ್ಟ ಕುಮಾರಧಾರ ನದಿಯಲ್ಲಿ ಕೊಚ್ಚಿಹೋದ ಘಟನೆ ನಡೆದಿದ್ದು, ಪೊಲೀಸ್​ ಹಾಗೂ ಅಗ್ನಿಶಾಮಕ ದಳ ಹುಡುಕಾಟದಲ್ಲಿ ತೊಡಗಿವೆ.

kukke-sri-subrahmanyaswaami-temple
ಕುಕ್ಕೆ ಸುಬ್ರಮಣ್ಯದಲ್ಲಿ ಸ್ನಾನಕ್ಕಾಗಿ ನದಿಗೆ ಹಾರಿದ ಯುವಕ ನೀರಿನಲ್ಲಿ ಕಣ್ಮರೆ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ) : ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಬಂದಿದ್ದ ಪ್ರವಾಸಿಗರೊಬ್ಬರು ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದು ಕಣ್ಮರೆಯಾದ ಘಟನೆ ಕುಮಾರಧಾರ ಸ್ನಾನಘಟ್ಟದ ಬಳಿ ನಡೆದಿದೆ. ಮಂಡ್ಯ ಮೂಲದ ಬೆಂಗಳೂರಿನಲ್ಲಿ ವಾಸವಿರುವ ಖಾಸಗಿ ಕಂಪನಿ ಉದ್ಯೋಗಿ ಶಿವು(25) ಎಂಬವರು ನೀರಿನಲ್ಲಿ ಕೊಚ್ಚಿ ಹೋಗಿರುವ ಯುವಕ.

ಶಿವು ಅವರು ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರು ದೀಪಾಂಜಲಿ ನಗರದಲ್ಲಿ ವಾಸಿಸುತ್ತಿದ್ದರು ಎನ್ನಲಾಗ್ತಿದೆ. ಸುಮಾರು 21 ಜನ ಗೆಳೆಯರ ತಂಡ ವಿವಿಧ ಕ್ಷೇತ್ರಗಳ ಭೇಟಿಗೆ ಬಂದಿದ್ದು, ಕುಕ್ಕೆಗೂ ಆಗಮಿಸಿ ಇಲ್ಲಿನ ಕುಮಾರಧಾರ ಸ್ನಾನಘಟ್ಟಕ್ಕೂ ಆಗಮಿಸಿದ್ದರು. ಈ ವೇಳೆ ನದಿಗೆ ಇಳಿಯದಂತೆ ಸ್ನೇಹಿತರು ಸೂಚಿಸಿದರೂ ನದಿ ಬಳಿ ಕಟ್ಟಿರುವ ತಡೆಹಗ್ಗ ದಾಟಿ ಶಿವು ನದಿ ನೀರಿಗೆ ಇಳಿದಿದ್ದಾರೆ ಎಂದು ಅವರ ಸ್ನೇಹಿತರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕುಕ್ಕೆ ಸುಬ್ರಮಣ್ಯದಲ್ಲಿ ಸ್ನಾನಕ್ಕಾಗಿ ನದಿಗೆ ಹಾರಿದ ಯುವಕ ನೀರಿನಲ್ಲಿ ಕಣ್ಮರೆ

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ನುರಿತ ಈಜುಗಾರರು ಆಗಮಿಸಿ ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.