ETV Bharat / city

ಲಾಕ್​ಡೌನ್ ನಡುವೆಯೂ ಕೆರೆಯಲ್ಲಿ ಈಜಲು ಹೋದ ಯುವಕ ಸಾವು

author img

By

Published : Apr 1, 2020, 8:56 PM IST

Death of a young man who went to swim in a lake ignoring the lock down
ಲಾಕ್​ಡೌನ್ ಕಡೆಗಣಿಸಿ ಕೆರೆಯಲ್ಲಿ ಈಜಲು ಹೋದ ಯುವಕ ಸಾವು

ಲಾಕ್​ಡೌನ್ ನಡುವೆಯೂ ಕೆರೆಯಲ್ಲಿ ಈಜಲು ಹೋದ ಯುವಕ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದ ದೊಡ್ಡಕೆರೆಯಲ್ಲಿ ನಡೆದಿದೆ.

ಮೈಸೂರು: ಲಾಕ್​ಡೌನ್ ನಡುವೆಯೂ ಕೆರೆಯಲ್ಲಿ ಈಜಲು ಹೋದ ಯುವಕ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದ ದೊಡ್ಡಕೆರೆಯಲ್ಲಿ ನಡೆದಿದೆ.

ಲಾಕ್​ಡೌನ್ ನಡುವೆಯೂ ಕೆರೆಯಲ್ಲಿ ಈಜಲು ಹೋದ ಯುವಕ ಸಾವು

ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಯುವಕ ಗೌತಮ್ (23). ಈತ ತನ್ನ ಸ್ನೇಹಿತರೊಂದಿಗೆ ಬುಧವಾರ ಮಧ್ಯಾಹ್ನ ದೊಡ್ಡ ಕೆರೆಯಲ್ಲಿ ಈಜಲು ಹೋದಾಗ ಕೆರೆಯಲ್ಲಿ ನೀರಿನ ಸುಳಿ ಇರುವುದು ಗೊತ್ತಾಗದೆ ಅದರಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ.

ಈ ಸಂಭಂದ ಪಟ್ಟಣದ ಪೊಲೀಸರು ಸ್ಥಳಕ್ಕೆ ಆಗಮಿಸಿ, ನೀರಿನಿಂದ ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಯುವಕನ ಶವವನ್ನು ಒಪ್ಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.