ಪಾರ್ಟಿಯಲ್ಲಿ ಗಲಾಟೆ, ಕೊಲೆ ಯತ್ನ ಆರೋಪ: ಮೈಸೂರು ಮಾಜಿ ಉಪ ಮೇಯರ್ ವಿರುದ್ಧ FIR

author img

By

Published : Oct 12, 2021, 8:30 AM IST

fir

ಪಾರ್ಟಿಯಲ್ಲಿ ನಡೆದ ಗಲಾಟೆ ಸಂಬಂಧ ಮೈಸೂರು ಮಾಜಿ ಉಪ ಮೇಯರ್ ಅರ್ಜುನ್ ಹಾಗೂ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮೈಸೂರು: ನಗರದ ಸೋಷಿಯಲ್ ಕ್ಲಬ್​​ನಲ್ಲಿ ನಡೆದ ಪಾರ್ಟಿಯ ವೇಳೆ ಗಲಾಟೆ ನಡೆದಿದ್ದು, ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರ ಪಾಲಿಕೆ ಮಾಜಿ ಉಪ ಮೇಯರ್ ಅರ್ಜುನ್ ಹಾಗೂ ಇತರ ಮೂವರ ವಿರುದ್ಧ ಹಲ್ಲೆ, ಕೊಲೆಯತ್ನ ಆರೋಪ ಮಾಡಿ ಸುಜಿತ್‌ ಕುಮಾರ್ ಕುಮಾರ್ ಅವರು ಹೆಬ್ಬಾಳ ಪೊಲೀಸರಿಗೆ ದೂರು ನೀಡಿದ್ದರು.

ಘಟನೆಯ ವಿವರ:

ಕಾಂಗ್ರೆಸ್ ಮುಖಂಡ ರಾಕೇಶ್ ಪಾಪಣ್ಣ ಭಾನುವಾರ ರಾಜಕೀಯ ಮುಖಂಡರು, ಸಿನಿಮಾ ನಟರು, ಗೆಳೆಯರಿಗಾಗಿ ಕೈಗಾರಿಕಾ ಪ್ರದೇಶದಲ್ಲಿರುವ ಸೋಷಿಯಲ್ ಕ್ಲಬ್​ನಲ್ಲಿ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಗೆ ಸುಜಿತ್‌ಕುಮಾರ್ ಹಾಗೂ ರವಿಕುಮಾರ್ ಸಹ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸುಜಿತ್ ಕುಮಾರ್ ಮತ್ತು ಅರ್ಜುನ್ ನಡುವೆ ಗಲಾಟೆ ನಡೆದಿದೆ. ಇಬ್ಬರೂ ಪರಸ್ಪರ ಮದ್ಯದ ಬಾಟಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಅರ್ಜುನ್ ಹಾಗೂ ಇತರೆ ಮೂವರು ಕೊಲೆ ಯತ್ನ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಗಲಾಟೆಯಲ್ಲಿ ಸುಜಿತ್‌ಕುಮಾರ್ ಹಾಗೂ ರವಿಕುಮಾರ್​ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುಜಿತ್ ಕುಮಾರ್ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಮಾಜಿ ಉಪಮೇಯರ್ ಅರ್ಜುನ್ ಹಾಗೂ ಇತರ ಮೂವರ ಮೇಲೆ ಐಪಿಸಿ ಸೆಕ್ಷನ್‌ 307, 323, 504, 506, 34 ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.